Sunday, April 5, 2026
Sunday, April 5, 2026

Shimoga-Bhadravati Urban Development Authority ಶಿವಮೊಗ್ಗದ ಹಸಿರೀಕರಣಕ್ಕೆ ಎಲ್ಲರೂ ಸಹಕರಿಸಬೇಕು- ಹೆಚ್.ಎಸ್.ಸುಂದರೇಶ್

Date:

Shimoga-Bhadravati Urban Development Authority ಶಿವಮೊಗ್ಗ ನಗರವನ್ನು ಸುಂದರ ಹಾಗೂ ಹಸುರೀಕರಣಗೊಳಿಸಲು ಸೂಡಾ ವತಿಯಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳು, ಬಡಾವಣೆಗಳಲ್ಲಿ ಗಿಡಗಳನ್ನು ನೆಡುವುದು ಹೀಗೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಗರವನ್ನು ಹಸಿರಾಗಿ ಮತ್ತು ಸುಂದರವಾಗಿಟ್ಟುಕೊಳ್ಳಲು ಎಲ್ಲರೂ ಸಹಕರಿಸಬೇಕೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮನವಿ ಮಾಡಿದರು.

ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ಅನ್ನಪೂರ್ಣೇಶ್ವರಿ ದೇವಸ್ಥಾನ ಪಕ್ಕದ ಉದ್ಯಾನವನ, ಸೂರ್ಯ ಬಡಾವಣೆ ಹಾಗೂ ಸೋಮಿನಕೊಪ್ಪ ರಸ್ತೆಯ ಕೆಹೆಚ್‌ಬಿ ಕಾಲೊನಿ ಬಳಿ ಉದ್ಯಾನವನಗಳ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ಅನ್ನಪೂರ್ಣೇಶ್ವರಿ ದೇವಸ್ಥಾನ ಪಕ್ಕದಲ್ಲಿ ಅಂದಾಜು ಮೊತ್ತ ರೂ.25 ಲಕ್ಷದಲ್ಲಿ ಉದ್ಯಾನವನದ ಉತ್ತರ ಮತ್ತು ಪೂರ್ವ ಭಾಗದಲ್ಲಿ ಫೌಂಡೇಶನ್ ಸಹಿತ ಚೈನ್‌ಲಿಂಕ್ ಫೆನ್ಸಿಂಗ್ ಮತ್ತು ಗೇಟ್ ಅಳವಡಿಸಲಾಗುವುದು. ಉದ್ಯಾನವನದ ದಕ್ಷಿಣ ಭಾಗದಲ್ಲಿ ಫೌಂಡೇಶನ್ ರಹಿತ ಚೈನ್‌ಲಿಂಕ್ ಫೆನ್ಸಿಂಗ್ ಅಳವಡಿಕೆ, ಉದ್ಯಾನವನದಲ್ಲಿ 6.00 * 9.00 ಮೀ ಅಳತೆಯ ಮೇಲ್ಛಾವಣಿಯೊಂದಿಗೆ ಯೋಗ ಮಂಟಪ ನಿರ್ಮಾಣ ಮಾಡಲಾಗುವುದು.
ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ಜಿ-ಬ್ಲಾಕ್‌ನಲ್ಲಿ ಹೊರಾಂಗಣ ಸಾಮಗ್ರಿ ಅಳವಡಿಸಿರುವ ಉದ್ಯಾನಕ್ಕೆ ಸುತ್ತಲೂ ಗ್ರಿಲ್ ಫೆನ್ಸಿಂಗ್ ಅಳವಡಿಸುವ ಕಾಮಗಾರಿಯನ್ನು ರೂ.20 ಲಕ್ಷದಲ್ಲಿ ಕೈಗೆತ್ತಿಗೊಳ್ಳಲು ಗುದ್ದಲಿ ಪೂಜೆ ನೆರವೇರಿಸಿದ್ದು, ಉದ್ಯಾನವನದ ಉತ್ತರ, ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ ಫೌಂಡೇಶನ್ ಸಹಿತ ಚೈನ್‌ಲಿಂಕ್ ಫೆನ್ಸಿಂಗ್ ಮತ್ತು ಗೇಟ್ ಅಳವಡಿಕೆ ಮಾಡಲಾಗುವುದು ಹಾಗೂ ಸುಮಾರು 35.00 ಮೀ. ಪಾಥ್ ವೇ ನಿರ್ಮಿಸಲಾಗುವುದು ಎಂದರು.

ಸೂರ್ಯ ಬಡಾವಣೆಯಲ್ಲಿರುವ ಹಾ.ಮ.ನಾಯ್ಕರವರ ಮನೆಯ ಹತ್ತಿರದ ಉದ್ಯಾನವನದ ಅಭಿವೃದ್ದಿ ಕಾಮಗಾರಿಯನ್ನು ಅಂದಾಜು ಮೊತ್ತ 25 ಲಕ್ಷದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು ಉದ್ಯಾನವನ ಪ್ರದೇಶಕ್ಕೆ ಎಂ ಎಸ್ ಪೋಲ್‌ನೊಂದಿಗೆ ಚೈನ್‌ಲಿಂಕ್ ಫೆನ್ಸಿಂಗ್ ಮತ್ತು ಗೇಟ್ ಅಳವಡಿಕೆ , ಪಾರ್ಕ್ ಪ್ಲಾಟ್‌ಫಾರ್ಮ್ ನಿರ್ಮಾಣದೊಂದಿಗೆ 08 ಸಂಖ್ಯೆ ಹೊರಾಂಗಣ ವ್ಯಾಯಾಮ ಸಾಮಗ್ರಿ ಅಳವಡಿಕೆ ಹಾಗೂ ಅಂದಾಜು 50.00 ಮೀ.ಪಾಥ್ ವೇ ನಿರ್ಮಾಣ ಹಾಗೂ 04 ಸಂಖ್ಯೆ ಸಾದರಳ್ಳಿ ಕಲ್ಲಿನ ಬೆಂಚು ಅಳವಡಿಸಲಾಗುವುದು.
ಸೋಮಿನಕೊಪ್ಪ ರಸ್ತೆಯ ಕೆಹೆಚ್‌ಬಿ ಕಾಲೋನಿಯ 5ನೇ ತಿರುವಿನಲ್ಲಿ ರೂ.20 ಲಕ್ಷ ಮೊತ್ತದಲ್ಲಿ ಉದ್ಯಾನವನ ಪ್ರದೇಶಕ್ಕೆ ಫೌಂಡೇಷನ್‌ಸಹಿತ ಚೈನ್‌ಲಿಂಕ್ ಫೆನ್ಸಿಂಗ್ ಮತ್ತು ಗೇಟ್ ಅಳವಡಿಕೆ, ಉದ್ಯಾನದಲ್ಲಿ 6.00*9.00 ಮೀ.ಅಳತೆಯ ಮೇಲ್ಚಾವಣಿಯೊಂದಿಗೆ ಯೋಗ ಮಂಟಪ ನಿರ್ಮಾಣ, ಹೊರ ಭಾಗದಲ್ಲಿ ಅಂದಾಜು 32.00 ಮೀ ಪಾಥ್‌ವೇ ನಿರ್ಮಾಣ ಹಾಗೂ 06 ಸಂಖ್ಯೆ ಸಾದರಳ್ಳಿ ಕಲ್ಲಿನ ಬೆಂಚು ಅಳವಡಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಸೂಡಾ ಸದಸ್ಯರಾದ ಎಸ್ ಎಂ ಸಿದ್ದಪ್ಪ, ಪ್ರವೀಣ್ ಕುಮಾರ್ ಎಂ, ಸೂಡಾ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಸೂಡಾ ಅಭಿಯಂತರರಾದ ಬಸವರಾಜಪ್ಪ, ಗಂಗಾಧರ ಸ್ವಾಮಿ, ಅಧಿಕಾರಿಗಳು, ನಿವಾಸಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...