sri adichunchanagiri mahasamsthana math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪರಮ ಪೂಜ್ಯ ಶ್ರೀ ಶ್ರೀ ಡಾ॥ ನಿರ್ಮಲಾನಂದ ಸ್ವಾಮೀಜಿರವರು ಹಾಗೂ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿರವರ ದಿವ್ಯ ಸಾನಿಧ್ಯದಲ್ಲಿ, ಶರಾವತಿ ನಗರದಲ್ಲಿರುವ ಪವಿತ್ರ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ವಾರ್ಷಿಕೋತ್ಸವ ಮಹೋತ್ಸವದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ, ವಿವಾಹ ಜೀವನದಲ್ಲಿ 50 ವರ್ಷ ಪೂರೈಸಿದ ಆದರ್ಶ ಹಿರಿಯ ದಂಪತಿಗಳನ್ನು ವೇದಿಕೆಗೆ ಆಮಂತ್ರಿಸಿ, ಅವರ ಶ್ರದ್ಧಾ, ಸಹನೆ, ಬದ್ಧತೆ ಮತ್ತು ಪಾವಿತ್ರ್ಯಪೂರ್ಣ ದಾಂಪತ್ಯ ಬದುಕಿಗೆ ಗೌರವ ಸೂಚಿಸಿ ಸನ್ಮಾನಿಸಲಾಯಿತು.
sri adichunchanagiri mahasamsthana math ಈ ಸಂದರ್ಭದಲ್ಲಿ ಸಂಸದರಾದ ಬಿ ವೈ ರಾಘವೇಂದ್ರ, ಕನ್ನಡ ಚಿತ್ರರಂಗದ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್, ದೇವಸ್ಥಾನದ ವ್ಯವಸ್ಥಾಪಕ ಮಂಡಳಿಯ ಸದಸ್ಯರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.
