Tuesday, February 3, 2026
Tuesday, February 3, 2026

Department of Youth Empowerment and Sports ಯು‌ವ ಸಬಲೀಕರಣ ಇಲಾಖೆಯಿಂದ ಅರ್ಹ ಕ್ರೀಡಾಪಟುಗಳ ” ವಿಶೇಷ ಆಯ್ಕೆ ಶಿಬಿರ” ಮಾಹಿತಿ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಪ್ರವೇಶಾವಕಾಶ ಕಲ್ಪಿಸಲು ರಾಜ್ಯದ ಕೆಲವು ಸ್ಥಳಗಳಲ್ಲಿ ‘ವಿಶೇಷ ಆಯ್ಕೆ ಶಿಬಿರ’ ಆಯೋಜಿಸಲಾಗಿದೆ.

ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಪ್ರವೇಶ ನೀಡಲು ಈಗಾಗಲೇ ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿರುತ್ತದೆ. ಆದರೆ ಸದರಿ ಆಯ್ಕೆ ಶಿಬಿರಗಳಲ್ಲಿ ವಿವಿಧ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶವನ್ನು ನೀಡುವ ದೃಷ್ಟಿಯಿಂದ ರಾಜ್ಯದ ಕೆಳಕಂಡ ಸ್ಥಳಗಳಲ್ಲಿ ವಿಶೇಷ ಆಯ್ಕೆ ಶಿಬಿರ ಏರ್ಪಡಿಸಲಾಗಿದೆ.

ಏ.15 ರಂದು ಕಂಠೀರವ ಕ್ರೀಡಾಂಗಣ ಬೆಂಗಳೂರು ಇಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಬ್ಯಾಸ್ಕೆಟ್‌ಬಾಲ್, ಫೆನ್ಸಿಂಗ್, ಆರ್ಚರಿ. ಧಾರವಾಡ ಜಿಲ್ಲಾ ಕ್ರೀಡಾಂಗಣ ಅಥ್ಲೆಟಿಕ್ಸ್, ವಾಲಿಬಾಲ್, ಬ್ಯಾಸ್ಕೆಟ್‌ಬಾಲ್, ಸೈಕ್ಲಿಂಗ್. ಕಲ್ಬುರ್ಗಿ ಜಿಲ್ಲಾ ಕ್ರೀಡಾಂಗಣ ಅಥ್ಲೆಟಿಕ್ಸ್, ವಾಲಿಬಾಲ್ ,ಹಾಸನ ಜಿಲ್ಲಾ ಕ್ರೀಡಾಂಗಣ ಫುಟ್‌ಬಾಲ್, ದಾವಣಗೆರೆ ಜಿಲ್ಲಾ ಕ್ರೀಡಾಂಗಣ ಕುಸ್ತಿ ಮತ್ತು ಕಬಡ್ಡಿ, ಮೈಸೂರು ಚಾಮುಂಡಿ ವಿಹಾರ ಕ್ರೀಡಾಂಗಣ ಹಾಕಿ, ತುಮಕೂರು ಜಿಲ್ಲಾ ಕ್ರೀಡಾಂಗಣ ಜಿಮ್ನಾಸ್ಟಿಕ್, ಏ.17 ರಂದು ಉಡುಪಿ ಜಿಲ್ಲಾ ಕ್ರೀಡಾಂಗಣ ಅಥ್ಲೆಟಿಕ್ಸ್, ವಾಲಿಬಾಲ್, ಬ್ಯಾಸ್ಕೆಟ್‌ಬಾಲ್, ಕಬಡ್ಡಿ. ಬೀದರ್ ಜಿಲ್ಲಾ ಕ್ರಿಡಾಂಗಣ ಸೈಕ್ಲಿಂಗ್. ಬಳ್ಳಾರಿ ಜಿಲ್ಲಾ ಕ್ರೀಡಾಂಗಣ ಫುಟ್‌ಬಾಲ್, ಗದಗ ಜಿಲ್ಲಾ ಕ್ರೀಡಾಂಗಣ ಹಾಕಿ, ಚಿಕ್ಕಮಗಳೂರು ಜಿಲ್ಲಾ ಕ್ರೀಡಾಂಗಣ ಜುಡೋ ಆಯ್ಕೆ ಇರುತ್ತದೆ.

ರಾಜ್ಯದ ಯಾವುದೇ ಭಾಗದ ಕ್ರೀಡಾಪಟುಗಳು ಭಾಗವಹಿಸಲು ಮುಕ್ತ ಅವಕಾಶವಿದೆ. 2025-26 ನೇ ಸಾಲಿನ ಪ್ರವೇಶಕ್ಕೆ ಈಗಾಗಲೇ ಆಯೋಜಿಸಲಾದ ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಈ ವಿಶೇಷ ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಬಹುದು.

Department of Youth Empowerment and Sports ಈಗಾಗಲೇ ಆಯ್ಕೆ ಶಿಬಿರಗಳಲ್ಲಿ ಭಾಗಿಯಾಗಿರುವ ಆದರೆ, ರಾಜ್ಯ ಮಟ್ಟದ ಆಯ್ಕೆ ಶಿಬಿರಕ್ಕೆ ಆಯ್ಕೆಯಾಗದ ಅಭ್ಯರ್ಥಿಗಳು ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಲು ಉದ್ದೇಶಿಸಿದಲ್ಲಿ ಈ ಬಗ್ಗೆ ಅರ್ಜಿ ನಮೂನೆಯಲ್ಲಿ ಕಡ್ಡಾಯವಾಗಿ ದಾಖಲಿಸಿ, ವಿಶೇಷ ಆಯ್ಕೆ ಶಿಬಿರದಲ್ಲಿ ಭಾಗವಹಿಸಬಹುದು.

8 ನೇ ತರಗತಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 6ನೇ ತರಗತಿ ಪ್ರವೇಶಕ್ಕೆ ಜೂನ್ 2025 ಕ್ಕೆ ಅನ್ವಯವಾಗುವಂತೆ 14 ವರ್ಷ ವಯಸ್ಸಿನ ಒಳಗೆ ಇರಬೇಕು. ಪ್ರಥಮ ಪಿಯುಸಿ ಪ್ರವೇಶ ಬಯಸುವ ಅಭ್ಯರ್ಥಿಗಳ ವಯಸ್ಸು ಜೂನ್ 2025 ಕ್ಕೆ ಅನ್ವಯವಾಗುವಂತೆ 18 ವರ್ಷ ವಯಸ್ಸಿನ ಒಳಗೆ ಇರಬೇಕು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಚೇರಿಯನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...