Sunday, August 2, 2026
Sunday, August 2, 2026

CM Siddaramaiah ರಾಜ್ಯ ಬಿಜೆಪಿ ನಾಯಕರಿಗೆ ಜನಾಕ್ರೋಶ‌ ಯಾತ್ರೆ ಮಾಡುವ‌ ಯಾವ‌ ನೈತಿಕತೆಯೂಇಲ್ಲ- ಸಿದ್ದರಾಮಯ್ಯ

Date:

CM Siddaramaiah ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿ ಜನಾಕ್ರೋಶ ಯಾತ್ರೆಗೆ ಚುರುಕು ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯ ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ.

ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರಲ್ ಕಚ್ಚಾತೈಲಕ್ಕೆ 120 ಡಾಲರ್ ಇತ್ತು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇತ್ತು, ಇಂದು 800 ರೂ. ಮೀರಿದೆ. ಪೆಟ್ರೋಲ್ – ಡೀಸೆಲ್ ಬೆಲೆಯನ್ನು ನರೇಂದ್ರ ಮೋದಿಯವರ ನೇತೃತ್ವದ‌ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ ಎಂದು ಮರು ಸವಾಲು ಹಾಕಿದ್ದಾರೆ.

CM Siddaramaiah ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪ ಅವರಿಗೇ ನಾಚಿಕೆಗೇಡಿನದು. ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದಾರೆ.

ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಮ್ಮ ಅವಧಿಯಲ್ಲಿ ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಾಗಿದೆ. ಇದು ಸರ್ಕಾರವೊಂದರ ಆರ್ಥಿಕ ದಿವಾಳಿತನವೇ?

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ? ಎಂದು ರಾಜ್ಯದ ಮುಖ್ಯಮಂತ್ತಿ ಸಿದಧರಾಮಯ್ಯನವರು ರಾಜ್ಯದ ಬಿಜೆಪಿ ನಾಯಕರಿಗೆ ಮಾತಿನ ಈಟಿಯಿಂದ ತಿವಿದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...