Saturday, July 11, 2026
Saturday, July 11, 2026

Ambedkar Jayanti ಗ್ರಾಮಾಂತರ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು- ಡಿ.ಬಿ.ವಾಗ್ದೇವಿ

Date:

Ambedkar Jayanti ಗ್ರಾಮಾಂತರದ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಅವರಲ್ಲಿಯೂ ಸಹ ಸಾಕಷ್ಟು ಪ್ರತಿಭೆ ಇದ್ದೇ ಇರುತ್ತದೆ ಅವರಿಗೆ ಪೂರಕವಾದ ವಾತಾವರಣವನ್ನು ಕಲ್ಪಿಸುವುದು ಸಂಘ ಸಂಸ್ಥೆಗಳ ಆದ್ಯ ಕರ್ತವ್ಯ ಸರ್ಕಾರದಿಂದ ಎಷ್ಟೇ ಸಹಕಾರ ಇದ್ದರು ಸಂಘ ಸಂಸ್ಥೆಗಳ ನೆರವು ಸಿಕ್ಕಾಗ ಆ ಮಕ್ಕಳು ಶಿಕ್ಷಣದಲ್ಲಿಯೂ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಪರಿಪೂರ್ಣತೆಯನ್ನು ಹೊಂದುತ್ತಾರೆ ಎಂದು ಇನ್ನರ್ವಿಲ್ ಶಿವಮೊಗ್ಗ ಪೂರ್ವ ಸಂಸ್ಥೆಯ ಅಧ್ಯಕ್ಷರಾದ ಡಿ ಬಿ ವಾಗ್ದೇವಿಯವರು ನುಡಿದರು. ಅಂಬೇಡ್ಕರ್ ಜಯಂತಿಯ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂಚಿನಹಳ್ಳಿಗೆ ಲೈಬ್ರರಿಯಾ ಪುಸ್ತಕಗಳನ್ನು ಇಡಲು ಇನ್ನರ್ವಿಲ್ ಸದಸ್ಯನಿಯರ ಸಹಕಾರದಿಂದ ಎರಡು ದೊಡ್ಡ ಅಲ್ಮೆರಗಳನ್ನು ಕೊಡುಗೆಯಾಗಿ ನೀಡಿ ನಂತರ ಲೇಖನ ಸಾಮಗ್ರಿಗಳನ್ನು ವಿತರಿಸಿದರು ಈಗಾಗಲೇ ಇನ್ನರ್ ವೀಲ್ ಶಿವಮೊಗ್ಗ ಸಂಸ್ಥೆ ವತಿಯಿಂದ ಗ್ರಾಮಾಂತರ ಪ್ರದೇಶದಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನ ಹಮ್ಮಿಕೊಳ್ಳುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನಮ್ಮ ಸದಸ್ಯನಿಯರ ಸಹಕಾರದಿಂದ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದೇವೆ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ವಿವಿಧ ಬಡಾವಣೆಗಳಲ್ಲಿ ಮಹಿಳೆಯರ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ಮಾನವೀಯ ಸೇವೆಗಳನ್ನು ಮಾಡುತ್ತಾ ಬಂದಿದ್ದೇವೆ ಎಂದು ನುಡಿದರು. Ambedkar Jayanti ಇದೇ ಸಂದರ್ಭದಲ್ಲಿ ಇನ್ನರ್ ವೀಲ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಬಿಂದು ವಿಜಯ ಕುಮಾರ್ ಅವರು ಮಾತನಾಡುತ್ತಾ ಸಂಘ ಸಂಸ್ಥೆಗಳಿಂದ ನೀಡಿದಂತಹ. ಕೊಡುಗೆಗಳು ಯಾವುದೇ ಕಾರಣಕ್ಕೂ ಉಪಯೋಗವಾಗಬಾರದು ಎಂದು ದೇಣಿಗೆ ನೀಡಿದ ದಾನಿಗಳನ್ನುಸ್ಮರಿಸಿದರು. ಕಾರ್ಯಕ್ರಮದಲ್ಲಿ ಇನ್ನರ್ವೀಲ್ ಮಾಜಿ ಅಧ್ಯಕ್ಷರಾದ. ಸುನಂದಾ ಜಗದೀಶ್. ವಾಣಿ ಪ್ರವೀಣ್. ಕಾರ್ಯದರ್ಶಿ ಲತಾ ಸೋಮಣ್ಣ ಹಾಗೂ ಮುಖ್ಯ ಶಿಕ್ಷಕರು ಮತ್ತು ಇನ್ನರ್ ವಿಲ್ ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...