Wednesday, July 9, 2025
Wednesday, July 9, 2025

Sahyadri Narayan Multispeciality Hospital ಏಪ್ರಿಲ್ 17 ಎನ್ ಹೆಚ್ ಆಸ್ಪತ್ರೆಯಿಂದ ” ಸರ್ವೈವರ್ಸ್ ಕ್ಲಿನಿಕ್” ಕ್ಯಾನ್ಸರ್ ವಾಸಿಯಾದವರಿಗಾಗಿ ಸಮಾಲೋಚನೆ ಚಟುವಟಿಕೆ

Date:

Sahyadri Narayan Multispeciality Hospital ಶಿವಮೊಗ್ಗ, ನಗರದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು, ಕ್ಯಾನ್ಸರ್‌ನಿಂದ ಗುಣಮುಖರಾದವರಿಗಾಗಿ (ಸರ್ವೈವರ್ಸ್) ತನ್ನ ಮಾಸಿಕ ‘ಸರ್ವೈವರ್ಸ್ ಕ್ಲಿನಿಕ್ ‘ ಅನ್ನು ಏಪ್ರಿಲ್ 17 ರಂದು ಮಧ್ಯಾಹ್ನ 2:00 ರಿಂದ 4:00 ಗಂಟೆಯವರೆಗೆ ಆಸ್ಪತ್ರೆಯ ಹರಕೆರೆ ಆವರಣದಲ್ಲಿ ಆಯೋಜಿಸಿದೆ.

ಈ ವಿಶೇಷ ಸಮಾಲೋಚನಾ ಕಾರ್ಯಕ್ರಮದಲ್ಲಿ, ಕಟೀಲು ಅಶೋಕ ಪೈ ಸ್ಮಾರಕ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಅರ್ಚನಾ ಭಟ್ ಕೆ. ಅವರು ಮಧ್ಯಾಹ್ನ 2:00 ಗಂಟೆಗೆ “ಕ್ಯಾನ್ಸರ್ ನಂತರದ ನೆಮ್ಮದಿ ಮತ್ತು ಸಂತಸ: ಭಾವನಾತ್ಮಕ ಏರಿಳಿತಗಳ ನಿರ್ವಹಣೆ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಆಸ್ಪತ್ರೆಯ ವೈದ್ಯಕೀಯ ಆಂಕೊಲಾಜಿ ವಿಭಾಗದ ವೈದ್ಯೆ ಡಾ. ಅಪರ್ಣಾ ಶ್ರೀವತ್ಸ ಅವರು ಕ್ಯಾನ್ಸರ್ ಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿರುವವರಿಗೆ ವೈದ್ಯಕೀಯ ಸಲಹೆ ಮತ್ತು ಸಮಾಲೋಚನೆ ನಡೆಸಿಕೊಡಲಿದ್ದಾರೆ.

ಈ ಕ್ಲಿನಿಕ್‌ನಲ್ಲಿ ಭಾಗವಹಿಸಲು ಆಸಕ್ತರು ಎನ್‌ಎಚ್ ಕೇರ್ ಆ್ಯಪ್ (NH Care App) ಮೂಲಕ ಅಥವಾ 18003090309 ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

Sahyadri Narayan Multispeciality Hospital ಕಾರ್ಯಕ್ರಮವನ್ನು ಆಸ್ಪತ್ರೆಯ ‘ಕ್ಯಾನ್ಸರ್ ಗೆ ಆನ್ಸರ್’ (Cancer Ge Answer) ಯೂಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು, ಇದರಿಂದ ಭಾಗವಹಿಸಲು ಸಾಧ್ಯವಾಗದವರೂ ವೀಕ್ಷಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ನವದೆಹಲಿಯಲ್ಲಿ”ಸಿಎಂ”ಸಿದ್ಧರಾಮಯ್ಯ ಅವರಿಂದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭೇಟಿ

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...

Rotary Club ರೋಟರಿ ಕ್ಲಬ್ ರಿವರ್ ಸೈಡ್ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಸನ್ಮಾನ

Rotary Club 24 ವರ್ಷಗಳಿಂದ ನಿರಂತರವಾಗಿ ಮನುಕುಲದ ಸೇವೆಯಲ್ಲಿ ಹಾಗೂ ಸಮಾಜಮುಖಿ...

Sitaramchandra Temple ಭಗವದ್ಗೀತೆಯ ಜ್ಞಾನದಿಂದ ಸಮಾಜದಲ್ಲಿ ಶಾಂತಿ & ಮಾನವೀಯತೆ ಸ್ಥಾಪನೆ- ಅಶೋಕ ಭಟ್

Sitaramchandra Temple ಭಗವದ್ಗೀತಾ ಜ್ಞಾನವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಸರ್ವರೂ ಸಮಾನರಾಗಿ ಸಮಾಜದಲ್ಲಿ...

Congress Karnataka ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್.ರಮೇಶ್

Congress Karnataka ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ...