Sunday, February 1, 2026
Sunday, February 1, 2026

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

Date:

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ದತ್ತಿ ದಾನಿಗಳಾದ ಶ್ರೀಮತಿ ಮಾನಸ ಶಿವರಾಮಕೃಷ್ಣರವರು ತಮ್ಮ ತಂದೆ ತಾಯಿಗಳಾದ ಶ್ರೀ ವಿ. ಎಚ್. ನಾಗೇಂದ್ರಜೋಯಿಸ್ ಮತ್ತು ಶ್ರೀಮತಿ ನಾಗರತ್ನಮ್ಮ ಎನ್. ಜೋಯಿಸ್ ಇವರ ಸ್ಮರಣಾರ್ಥ “ಪ್ರಬಂಧ”ಕುರಿತಾದ ದತ್ತಿ ಕಾರ್ಯಕ್ರಮ ನಡೆಸಿಕೊಟ್ಟರು. ಕು. ವಿಧಾತ್ರಿಯ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮಕ್ಕೆ ಸಂಘದ ಕಾರ್ಯದರ್ಶಿಗಳಾದ ಶ್ರೀಮತಿ ಮಾಲಾ ರಾಮಚಂದ್ರ ಎಲ್ಲರನ್ನೂ ಸ್ವಾಗತಿಸಿದರು. ಸಂಘದ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಸಿ. ಎಸ್. ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ಎಸ್. ವಿ ಚಂದ್ರಕಲಾರವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಶ್ರೀಮತಿ ಮಾನಸ ಶಿವರಾಮಕೃಷ್ಣರವರು ಉದ್ಘಾಟಿಸಿ, ತಮ್ಮ ತಂದೆ ತಾಯಿಗಳ ಧನಾತ್ಮಕ ಹಾಗೂ ಸಮಾಜಮುಖಿ ಚಿಂತನೆಯ ಅನುಕರಣೀಯ ಗುಣಗಳನ್ನು ಸ್ಮರಿಸಿಕೊಂಡರು. ಶ್ರೀಮತಿ ಲಕ್ಷೀ ಶಾಸ್ತ್ರೀ ಯವರು ಪ್ರಬಂಧ ರಚನೆ -ವಿಸ್ತಾರ ಕುರಿತು ಸೋದಾಹರಣೆಗಳ ಮೂಲಕ ಸವಿಸ್ತಾರವಾಗಿ ವಿವರಿಸಿದರು. ಲೇಖಕಿ ಸು. ವಿಜಯಲಕ್ಷೀ ಯವರು ಸೊಗಸಾದ ಸ್ವರಚಿತ ಪ್ರಬಂಧ ಮಂಡಿಸಿದರು. ಖ್ಯಾತ ಗಾಯಕಿಯರಾದ ಶ್ರೀಮತಿ ವಿಜಯಾ ಕಾಂತೇಶ್, ಸುಜಯಾ ರಾಧಾಕೃಷ್ಣ, ಅಂಬಿಕಾ ದೇವರಾಜ್ ಸುಶ್ರಾವ್ಯವಾಗಿ ಭಾವಗೀತೆಗಳನ್ನು ಹಾಡಿದರು. ಶ್ರೀಮತಿ ಆಶಾಲತಾರವರು ನಿರೂಪಣೆ ಹಾಗೂ ವಂದನಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...