Saturday, May 17, 2025
Saturday, May 17, 2025

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

Date:

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಯ ಆಸ್ತಿ ಗಳನ್ನು ಮುಟ್ಟು ಗೋಲು ಹಾಕಿ ಕೊಳ್ಳಲು ಪ್ರಯತ್ನಿಸುತ್ತಿದೆ ಇದನ್ನು ಜಿಲ್ಲಾ ಯುವ ಕಾಂಗ್ರೇಸ್ ಖಂಡಿಸುತ್ತದೆ

Sonia Gandhi ಈ ಸಂದರ್ಭದಲ್ಲಿ KPCC ಪ್ರಧಾನ ಕಾರ್ಯದರ್ಶಿ ಎನ್ ರಮೇಶ್ ಮಾತನಾಡಿ ಕಾಂಗ್ರೇಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮುಂದುವರಿಸಿದೆ ಇವರ ಒಡೆತನದಲ್ಲಿ ಇರುವ ನೇಷ್ನಲ್ ಹೆರಾಲ್ಡ್ ಸಂಸ್ಥೆ ಯನ್ನೇ ಮುಚ್ಚಿ ಹಾಕುವ ಹುನ್ನಾರ ನೆಡೆಸುತ್ತಿದ್ದು ಈಗಾಗಲೇ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಇಡಿ ಆರೋಪ ಪಟ್ಟಿ ಸಲ್ಲಿಸಿದೆ ಇದನ್ನು ನಾವು ಪ್ರಬಲವಾಗಿ ಖಂಡಿಸುತ್ತೇವೆ ಎಂದು ದೂರಿದರು
ಬ್ಲಾಕ್ ಕಾಂಗ್ರೆಸ್ ನ ಶಿವಕುಮಾರ್ ಮಾತನಾಡಿ
ಬಿ ಜೆ ಪಿ ಸರ್ಕಾರ ಅಧಿಕಾರಕ್ಕೆ ಬಂದ್ ಮೇಲೆ ಕಾಂಗ್ರೆಸ್ ನಾಯಕರು ಸೇರಿದಂತೆ ವಿರೋಧ ಪಕ್ಷ ದ ನಾಯಕರು ಗಳ ವಿರುದ್ಧ ಇಡಿ ಐಟಿ ಮುಂತಾದ ತನಿಖಾ ಸಂಸ್ಥೆ ಗಳನ್ನು ಮುಂದಿಟ್ಟು ಕೊಂಡು ದಾಳಿ ನೆಡೆಸಲು ಮುಂದಾಗಿದೆ ಕೇಂದ್ರ ಸರ್ಕಾರ ಈ ತನಿಖೆ ಸಂಸ್ಥೆಗಳ ಜುಟ್ಟನ್ನು ತನ್ನ ಕೈನಲ್ಲಿ ಇಟ್ಟುಕೊಂಡು ಷಡ್ಯಂತರದ ಮೂಲಕ ವಿರೋಧ ಪಕ್ಷಗಳನ್ನು ಬಗ್ಗು ಬಡಿಯಲು ಮುಂದಾಗಿದೆ
ಕೂಡಲೇ ರಾಷ್ಟ್ರ ಪತಿಗಳು ಮದ್ಯಪ್ರವೇಶ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕ್ರಮ ತೆಗೆದು ಕೊಳ್ಳ ಬೇಕು ಮತ್ತು ದ್ವೇಷ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ವಜಾ ಮಾಡಬೇಕು ಎಂದು ಜಿಲ್ಲಾ ಯುವ ಕಾಂಗ್ರೇಸ್ ಆಗ್ರಹಿಸುತ್ತಿದೆ ಈ ಸಂದರ್ಭದಲ್ಲಿ PLD ಬ್ಯಾಂಕ್ ಅಧ್ಯಕ್ಷರಾದ ವಿಜಯಕುಮಾರ್, ಚೇತನ್, ಮಧುಸೂದನ್, ಇಮ್ರಾನ್, ಅಕ್ಬರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ಚರಣ್, ಪ್ರವೀಣ್, ಗಿರೀಶ್, ಸಕ್ಲೇನ್, ಅನಿಲ್ ಪಾಟೀಲ್, ಧನುಷ್, ಮಲಗಪ್ಪ ಶಿವು, ಆಕಾಶ್, NSUI ಜಿಲ್ಲಾಧ್ಯಕ್ಷ ವಿಜಯ್, ರವಿ ಕಟಿಕೆರೆ, ಚಂದ್ರ ಜಿ ರಾವ್, ಸುಭಾನ್, ಅಭಿ, ಆದಿತ್ಯ, ವರುಣ್ ವಿ ಪಂಡಿತ್ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

General Cyber Security Advisories ಕೆನರಾ ಬ್ಯಾಂಕ್ ನಲ್ಲಿಕ್ರೆಡಿಟ್ ಕಾರ್ಡ್ ಸೇವಾ ನ್ಯೂನತೆ. ಗ್ರಾಹಕರ ಪರ ತೀರ್ಪು‌ ನೀಡಿದ ಆಯೋಗ

General Cyber Security Advisories ಶಿವಮೊಗ್ಗದ ವಿಷ್ಣುಮೂರ್ತಿ ಕೇಕುಡ ಬಿನ್ ಶ್ರೀನಿವಾಸ...

World Hypertension Day ರಕ್ತದೊತ್ತಡ ಕುರಿತು ಜನರಲ್ಲಿ ಅರಿವು ಮೂಡಿಸುವುದೇ ದಿನಾಚರಣೆ ಉದ್ದೇಶ- ಡಾ.ತಿಮ್ಮಪ್ಪ

World Hypertension Day ಪ್ರಸ್ತುತದ ಒತ್ತಡದ ಜಗತ್ತಿನಲ್ಲಿ ರಕ್ತದೊತ್ತಡದ ಕುರಿತಾದ ಅರಿವು,...

Mandya Ramesh ಮಂಡ್ಯ ರಮೇಶ್ ನೇತೃತ್ವದ ” ನಟನ” ಸಂಸ್ಥೆಯಲ್ಲಿ ರಂಗಭೂಮಿ ಡಿಪ್ಲೋಮಾ ಪಡೆಯಲು ಆಸಕ್ತರಿಗೆ ಅವಕಾಶ

Mandya Ramesh ಮೈಸೂರಿನ ಪ್ರತಿಷ್ಟಿತ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ 2025-26...