ಶಿವಮೊಗ್ಗ ಜಿಲ್ಲಾ ಸೈಟ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಶಕುಂತಲಾ ಚಂದ್ರಶೇಖರ್ ಅವರು ಸ್ಥಳೀಯ ಸಂಸ್ಥೆ ಕಾರ್ಯದರ್ಶಿಗಳಿಗೆ ಅಭಿನಂದನಾ ಪತ್ರ ನೀಡಿ ಅಭಿನಂದಿಸಿದರು.
ಭಾರತ್ ಸೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ಜಿಲ್ಲಾ ಸಂಸ್ಥೆ ಶಿವಮೊಗ್ಗ ಆಶ್ರಯದಲ್ಲಿ ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿಗಳು, ಸಹಾಯಕ ಜಿಲ್ಲಾ ಆಯುಕ್ತರುಗಳು ಹಾಗೂ ತರಬೇತಿ ತಂಡದ ನಾಯಕರುಗಳ ಒಂದು ದಿನದ ಕಾರ್ಯಾಗಾರ ನಡೆಯಿತು.
Bharat Tours and Guides ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಅವರು ಶೇ. 100 ರಷ್ಟು ಗಣತಿ ಗುರಿ ಸಾಧಿಸಿದ ಜಿಲ್ಲಾ ಸಂಸ್ಥೆಗೆ ಸಹಕರಿಸಿದ ಸ್ಥಳೀಯ ಸಂಸ್ಥೆ ಕಾರ್ಯದರ್ಶಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು.
ಜಿಲ್ಲಾ ಆಯುಕ್ತರು (ಸೈಟ್ ) ಎಸ್.ಜಿ.ಆನಂದ್ , ಜಿಲ್ಲಾ ಆಯುಕ್ತರು (ರೋವರ್) ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ.ಕೆ.ವಿ., ಜಿಲ್ಲಾ ತರಬೇತಿ ಆಯುಕ್ತರಾದ ಎಚ್.ಶಿವಶಂಕರಪ್ಪ, ಗೀತಾ ಚಿಕ್ಕಮಠ, ಕೇಂದ್ರ ಸ್ಥಾನಿಕ ಆಯುಕ್ತರಾದ ಘನಶ್ಯಾಮ್ ಗಿರಿಮಾಜಿ, ಅಶ್ವಿನಿ ದೊರೈ, ಜಿಲ್ಲಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಲಕ್ಷ್ಮೀ ರವಿ ಉಪಸ್ಥಿತರಿದ್ದರು. ಜಿಲ್ಲೆಯಾದ್ಯಂತ ಸ್ಕೌಟ್ – ಗೈಡ್ ಚಳುವಳಿಯನ್ನು ಬಲಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
.