Thursday, March 19, 2026
Thursday, March 19, 2026

S.N.Chennabasappa ಪರೀಕ್ಷೆಗೆ ಮುನ್ನ ತಪಾಸಣೆಯಲ್ಲಿ ಜನಿವಾರಕ್ಕೆ ಕತ್ತರಿ‌ ಪ್ರಕರಣ, ಸೂಕ್ತ ಕ್ರಮಕ್ಕೆ ಶಾಸಕ ‘ಚೆನ್ನಿ’ ಆಗ್ರಹ

Date:

S.N.Chennabasappa ವಿದ್ಯಾರ್ಥಿಗಳು ಮತ್ತು ಬಹುಸಂಖ್ಯಾತರು ನನ್ನನ್ನು ಭೇಟಿಮಾಡಿ ರಾಜ್ಯ ಸರಕಾರದ ಪರೀಕ್ಷಾ ಮಂಡಳಿಯ ಅಧಿಕಾರಿಯಿಂದ ತಮಗಾದ ಅನ್ಯಾಯವನ್ನು ತೋಡಿಕೊಂಡಿರುತ್ತಾರೆ. ದಿನಾಂಕ: 16/04/2025 ರಂದು ಶಿವಮೊಗ್ಗ ನಗರದ ಆದಿಚುಂಚನಗಿರಿ ಬಿಜಿಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬಹುಸಂಖ್ಯಾತ ವಿದ್ಯಾರ್ಥಿಗಳು ನಿತ್ಯ ಧರಿಸುವ ಜನಿವಾರ, ಶಿವದಾರ, ಕಾಶಿದಾರ ಹಾಗು ನಂಬಿದ ದೇವರುಗಳ ದಾರದ ಸಂಕೇತಗಳನ್ನೆಲ್ಲಾ ಬಿಚ್ಚಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳನ್ನು ಗೊಂದಲಗೊಳಿಸಿದ್ದಲ್ಲದೇ ಅಧೀರರನ್ನಾಗಿ ಮಾಡಿ ತೊಂದರೆ ಕೊಟ್ಟಿದ್ದಾರೆ. ಇದು ವಿದ್ಯಾರ್ಥಿಯ ಹುಟ್ಟು ನಂಬಿಕೆ ಮತ್ತು ಭವಿಷ್ಯ ಎರಡನ್ನೂ ನಿಶ್ಚಿತವಾಗಿ ತೊಡೆದು ಹಾಕುವ ಪ್ರಯತ್ನವಾಗಿದೆ. ಪರೀಕ್ಷಾ ಕೇಂದ್ರದ ಅಧಿಕಾರಿ ನಡೆದು ಕೊಂಡಿರುವ ರೀತಿ ಬಹುಸಂಖ್ಯಾತರ ಮೇಲಿನ ನೇರ ಅಕ್ರಮವಾಗಿರುತ್ತದೆ ಮತ್ತು ಅತೀರೇಕದ ವರ್ತನೆಯಾಗಿರುತ್ತದೆ.

S.N.Chennabasappa ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ಶಿವದಾರಗಳನ್ನು ಕತ್ತರಿಸಿರುವುದು ಧಾರ್ಮಿಕ ಭಾವನೆಗಳಿಗೆ ಧಕ್ಕೆತರುವ ಕೆಲಸವಾಗಿರುತ್ತದೆ. ಮೇಲ್ನೋಟಕ್ಕೆ ಆಡಳಿತದಿಂದ ನಡೆದ ತಪ್ಪು ತೋರುತ್ತದೆ ಈ ಬಗ್ಗೆ ಕುರಿತು ತಕ್ಷಣವೇ ಈ ವಿಷಯ ಪರಿಶೀಲಿಸಿ ತಪ್ಪು ಎಸಗಿದ ಅಧಿಕಾರಿಯ ಮೇಲೆ ತಕ್ಷಣ ಸೂಕ್ತ ಕಠಿಣ ಕ್ರಮ ಜರುಗಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಸನ್ನಿವೇಶಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕಾಗಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...