Monday, February 2, 2026
Monday, February 2, 2026

S.N.Chennabasappa ಪರೀಕ್ಷೆಗೆ ಮುನ್ನ ತಪಾಸಣೆಯಲ್ಲಿ ಜನಿವಾರಕ್ಕೆ ಕತ್ತರಿ‌ ಪ್ರಕರಣ, ಸೂಕ್ತ ಕ್ರಮಕ್ಕೆ ಶಾಸಕ ‘ಚೆನ್ನಿ’ ಆಗ್ರಹ

Date:

S.N.Chennabasappa ವಿದ್ಯಾರ್ಥಿಗಳು ಮತ್ತು ಬಹುಸಂಖ್ಯಾತರು ನನ್ನನ್ನು ಭೇಟಿಮಾಡಿ ರಾಜ್ಯ ಸರಕಾರದ ಪರೀಕ್ಷಾ ಮಂಡಳಿಯ ಅಧಿಕಾರಿಯಿಂದ ತಮಗಾದ ಅನ್ಯಾಯವನ್ನು ತೋಡಿಕೊಂಡಿರುತ್ತಾರೆ. ದಿನಾಂಕ: 16/04/2025 ರಂದು ಶಿವಮೊಗ್ಗ ನಗರದ ಆದಿಚುಂಚನಗಿರಿ ಬಿಜಿಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬಹುಸಂಖ್ಯಾತ ವಿದ್ಯಾರ್ಥಿಗಳು ನಿತ್ಯ ಧರಿಸುವ ಜನಿವಾರ, ಶಿವದಾರ, ಕಾಶಿದಾರ ಹಾಗು ನಂಬಿದ ದೇವರುಗಳ ದಾರದ ಸಂಕೇತಗಳನ್ನೆಲ್ಲಾ ಬಿಚ್ಚಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳನ್ನು ಗೊಂದಲಗೊಳಿಸಿದ್ದಲ್ಲದೇ ಅಧೀರರನ್ನಾಗಿ ಮಾಡಿ ತೊಂದರೆ ಕೊಟ್ಟಿದ್ದಾರೆ. ಇದು ವಿದ್ಯಾರ್ಥಿಯ ಹುಟ್ಟು ನಂಬಿಕೆ ಮತ್ತು ಭವಿಷ್ಯ ಎರಡನ್ನೂ ನಿಶ್ಚಿತವಾಗಿ ತೊಡೆದು ಹಾಕುವ ಪ್ರಯತ್ನವಾಗಿದೆ. ಪರೀಕ್ಷಾ ಕೇಂದ್ರದ ಅಧಿಕಾರಿ ನಡೆದು ಕೊಂಡಿರುವ ರೀತಿ ಬಹುಸಂಖ್ಯಾತರ ಮೇಲಿನ ನೇರ ಅಕ್ರಮವಾಗಿರುತ್ತದೆ ಮತ್ತು ಅತೀರೇಕದ ವರ್ತನೆಯಾಗಿರುತ್ತದೆ.

S.N.Chennabasappa ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ಶಿವದಾರಗಳನ್ನು ಕತ್ತರಿಸಿರುವುದು ಧಾರ್ಮಿಕ ಭಾವನೆಗಳಿಗೆ ಧಕ್ಕೆತರುವ ಕೆಲಸವಾಗಿರುತ್ತದೆ. ಮೇಲ್ನೋಟಕ್ಕೆ ಆಡಳಿತದಿಂದ ನಡೆದ ತಪ್ಪು ತೋರುತ್ತದೆ ಈ ಬಗ್ಗೆ ಕುರಿತು ತಕ್ಷಣವೇ ಈ ವಿಷಯ ಪರಿಶೀಲಿಸಿ ತಪ್ಪು ಎಸಗಿದ ಅಧಿಕಾರಿಯ ಮೇಲೆ ತಕ್ಷಣ ಸೂಕ್ತ ಕಠಿಣ ಕ್ರಮ ಜರುಗಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಸನ್ನಿವೇಶಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕಾಗಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...