Sunday, August 2, 2026
Sunday, August 2, 2026

CM Siddaramaiah ರೈತರು, ಶಿಕ್ಷಕರು,ಸೈನಿಕರ ಪರ ನಿಲ್ಲುವುದು ನಮ್ಮ ಬದ್ದತೆ- ಸಿದ್ಧರಾಮಯ್ಯ

Date:

CM Siddaramaiah ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು. ಅವರ ಜೊತೆ ನಿಲ್ಲುವುದು ನಮ್ಮ ಬದ್ಧತೆಯಾಗಿದೆ.

ಕೃಷಿಕರಿಗೆ ಶೇ.40, ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ.50 ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು ₹400 ಕೋಟಿ ವೆಚ್ಚದ ಕೃಷಿ ಯಂತ್ರಗಳು ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ‌ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡುತ್ತಿದ್ದರು.

ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗಾಗಿ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ.

ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡಲು ಶುರು ಮಾಡಿದೆವು.

CM Siddaramaiah ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ₹23,000 ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ
ಎಂದು ಸಿದ್ಧರಾಮಯ್ಯನವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...