Wednesday, July 8, 2026
Wednesday, July 8, 2026

Department of Animal Husbandry and Veterinary Services ಏಪ್ರಿಲ್ 21 ರಿಂದ ಜೂನ್ 4 ವರೆಗೆ ಜಾನುವಾರು ಲಸಿಕೆ ಅಭಿಯಾನ

Date:

Department of Animal Husbandry and Veterinary Services ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಚಾಲನೆ ನೀಡಿದರು.

ಏಪ್ರಿಲ್ 21 ರಿಂದ ಜೂನ್ 4 ರವರೆಗೆ ರಾಜ್ಯಾದ್ಯಂತ 45 ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ.

ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುವ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿರುವ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗ ಲಸಿಕೆ ಅಭಿಯಾನದ 7 ನೇ ಸುತ್ತಿನ ಪೋಸ್ಟರ್ ಅನ್ನು ಅನಾವರಣಗೊಳಿಸಿದ ನಂತರ, ಶ್ರೀ ಎಸ್. ಮಧು ಬಂಗಾರಪ್ಪ ಅವರು ಸಾರ್ವಜನಿಕರು ಉಚಿತ ಲಸಿಕೆ ಅಭಿಯಾನದ ಲಾಭವನ್ನು ಪಡೆದುಕೊಳ್ಳಬೇಕು ಮತ್ತು ತಮ್ಮ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗ ಎರಡರ ವಿರುದ್ಧ ಲಸಿಕೆ ಹಾಕುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಅಭಿಯಾನವನ್ನು ಬೆಂಬಲಿಸಬೇಕೆಂದು ಹೇಳಿದರು.

“ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗಕ್ಕೆ ಒಳಗಾಗುವ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿಗಳು ನಿಮ್ಮ ಗ್ರಾಮಕ್ಕೆ ಭೇಟಿ ಲಸಿಕೆ ಹಾಕುತ್ತಾರೆ. ಅವರೊಂದಿಗೆ ಸಹಕರಿಸಿ ಮತ್ತು ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಂಡು ಈ ರೋಗಗಳಿಂದ ಗೋವುಗಳನ್ನು ರಕ್ಷಿಸಿ” ಗೋಗಳ ಸಂರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿರುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Department of Animal Husbandry and Veterinary Services ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿದೆ.

ಜಾನುವಾರು ಸಾಕಾಣಿಕೆ ದಾರರು ಎದುರಿಸಲು ಉಪಯೋಗಪಡಿಸಿಕೊಳ್ಳಿ ಎಂದರು
ಈ ಸಂದರ್ಭದಲ್ಲಿ ಪಶುಪಾಲನ ಇಲಾಖೆಯ ಉಪ ನಿರ್ದೇಶಕರಾದ ಡಾ. ಬಾಬು ರತ್ನ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...