Monday, December 15, 2025
Monday, December 15, 2025

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

Date:

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀ ವಿಶ್ವಮಧ್ವ ಮಹಾಪರಿಷತ್ (ಶಿವಮೊಗ್ಗ ಶಾಖೆ) ಹಾಗೂ ಶಿವಮೊಗ್ಗ ಜಿಲ್ಲಾ ಸರ್ವ ವಿಪ್ರವೃಂದದ ನೇತೃತ್ವದಲ್ಲಿ ನಡೆದ ಮೌನ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಸಿಇಟಿ ಪರೀಕ್ಷೆಯ ವೇಳೆ, ಶಿವಮೊಗ್ಗ, ಬೀದರ್ ಹಾಗೂ ಇತರ ಕೆಲವೊಂದು ಸ್ಥಳಗಳಲ್ಲಿ ಜನಿವಾರವನ್ನು ಬಿಚ್ಚುವ ಘಟನೆಗಳನ್ನು ಗಂಭೀರವಾಗಿ ಖಂಡಿಸಿ, ಹಿಂದೂ ಸಂಸ್ಕೃತಿಗೆ ಹಾಗೂ ವೈದಿಕ ಪರಂಪರೆಗೆ ಅಪಮಾನವಾಗಿರುವುದರಿಂದ, ಇಂತಹ ಘಟನೆಯನ್ನು ತಕ್ಷಣ ನಿಲ್ಲಿಸಿ, ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶ್ರೀ ವಿಶ್ವಮಧ್ವ ಮಹಾಪರಿಷತ್ (ಶಿವಮೊಗ್ಗ ಶಾಖೆ) ಹಾಗೂ ಶಿವಮೊಗ್ಗ ಜಿಲ್ಲಾ ಸರ್ವ ವಿಪ್ರವೃಂದದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

S.N.Chennabasappa ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್, ಶ್ರೀ ವಿಶ್ವಮಧ್ವ ಮಹಾಪರಿಷತ್ ಶಿವಮೊಗ್ಗ ಶಾಖೆಯ ಪ್ರಮುಖರು, ಜಿಲ್ಲಾ ಸರ್ವ ವಿಪ್ರವೃಂದದ ಪದಾಧಿಕಾರಿಗಳು ಹಾಗೂ ಭಕ್ತ ವೃಂದಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...