Friday, March 20, 2026
Friday, March 20, 2026

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

Date:

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀ ವಿಶ್ವಮಧ್ವ ಮಹಾಪರಿಷತ್ (ಶಿವಮೊಗ್ಗ ಶಾಖೆ) ಹಾಗೂ ಶಿವಮೊಗ್ಗ ಜಿಲ್ಲಾ ಸರ್ವ ವಿಪ್ರವೃಂದದ ನೇತೃತ್ವದಲ್ಲಿ ನಡೆದ ಮೌನ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಸಿಇಟಿ ಪರೀಕ್ಷೆಯ ವೇಳೆ, ಶಿವಮೊಗ್ಗ, ಬೀದರ್ ಹಾಗೂ ಇತರ ಕೆಲವೊಂದು ಸ್ಥಳಗಳಲ್ಲಿ ಜನಿವಾರವನ್ನು ಬಿಚ್ಚುವ ಘಟನೆಗಳನ್ನು ಗಂಭೀರವಾಗಿ ಖಂಡಿಸಿ, ಹಿಂದೂ ಸಂಸ್ಕೃತಿಗೆ ಹಾಗೂ ವೈದಿಕ ಪರಂಪರೆಗೆ ಅಪಮಾನವಾಗಿರುವುದರಿಂದ, ಇಂತಹ ಘಟನೆಯನ್ನು ತಕ್ಷಣ ನಿಲ್ಲಿಸಿ, ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶ್ರೀ ವಿಶ್ವಮಧ್ವ ಮಹಾಪರಿಷತ್ (ಶಿವಮೊಗ್ಗ ಶಾಖೆ) ಹಾಗೂ ಶಿವಮೊಗ್ಗ ಜಿಲ್ಲಾ ಸರ್ವ ವಿಪ್ರವೃಂದದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

S.N.Chennabasappa ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್, ಶ್ರೀ ವಿಶ್ವಮಧ್ವ ಮಹಾಪರಿಷತ್ ಶಿವಮೊಗ್ಗ ಶಾಖೆಯ ಪ್ರಮುಖರು, ಜಿಲ್ಲಾ ಸರ್ವ ವಿಪ್ರವೃಂದದ ಪದಾಧಿಕಾರಿಗಳು ಹಾಗೂ ಭಕ್ತ ವೃಂದಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...