News Week
Magazine PRO

Company

Thursday, May 1, 2025

Madhu Bangarappa ಸೊರಬ ತಾಲ್ಲೂಕಿನಲ್ಲಿನ ಕಾಮಗಾರಿಗಳನ್ನ ತ್ವರಿತ ಪೂರ್ಣಗೊಳಿಸಿ- ಮಧು ಬಂಗಾರಪ್ಪ

Date:


Madhu Bangarappa ಶಿವಮೊಗ್ಗ ತಾಲೂಕಿನಲ್ಲಿ ವಿವಿಧ ಇಲಾಖೆಗಳ ಮೂಲಕ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವರ ಉದ್ಘಾಟನೆಗಾಗಿ ತಡಮಾಡದೆ ತ್ವರಿತವಾಗಿ ಆರಂಭಿಸಿ, ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಜ್ಜುಗೊಳಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಸೊರಬದ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಶೀಘ್ರದಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಈ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಉಚಿತವಾಗಿ ನಡೆಸಲಾಗುವುದು. ವಿಶೇಷವಾಗಿ ಮೂಲಭೂತ ಸೌಕರ್ಯ ಹೊಂದಿರುವ ಶಾಲೆಗಳಲ್ಲಿ ತರಗತಿಗಳ ಆರಂಭಕ್ಕೆ ಆದ್ಯತೆ ನೀಡಲಾಗುವುದು ಎಂದರು.
Madhu Bangarappa ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಶಾಲಾ ಫಲಿತಾಂಶ ಸುಧಾರಣಗೆ ವಿಶೇಷ ಕಾಳಜಿ ವಹಿಸಬೇಕು. ಯಾವುದೇ ಮಗು ಶಾಲಾ ದಾಖಲಾತಿಯಿಂದ ಹೊರಗುಳಿಯದಂತೆ ಗಮನಿಸಬೇಕು ಅಲ್ಲದೆ ದಾಖಲಾತಿಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬರಬೇಕು ಎಂದವರು ಸೂಚಿಸಿದರು.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದು, ಮಕ್ಕಳು ಅವರಿಂದ ಬೋಧನೆಯ ಲಾಭ ಪಡೆದು, ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶಾಲಾರಂಭದ ಮೊದಲ ದಿನ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳನ್ನು ಸ್ವಾಗತಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಸಮೀಪದ ಶಾಲೆಯಲ್ಲಿ ಹಾಜರಿರುವಂತೆ ಸೂಚಿಸಿದ ಅವರು, ಶಿಕ್ಷಕರು ಗುಣಮಟ್ಟದ ಬೋಧನೆಗೆ ಗಮನಹರಿಸುವಂತೆ ಸೂಚಿಸಿದರು.
ಪ್ರಸ್ತುತ ಪ್ರಕಟಿಸಲಾಗಿರುವ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಶೇ.94ರಷ್ಟು ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಉತ್ತೀರ್ಣರಾದ ಸುಮಾರು 70,000ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಕೆಯ ಕಾರಣದಿಂದ ಪರೀಕ್ಷೆ ಬರೆಯುತ್ತಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳು ಬರೆಯುವ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದಿರುವುದನ್ನು ನಮೂದಿಸಿ, ಪ್ರಮಾಣಪತ್ರ ವಿತರಿಸಲು ಕ್ರಮವಹಿಸಲಾಗುವುದು ಎಂದರು.
ಬಿಸಿಯೂಟ ತಯಾರಿಕೆಯಲ್ಲಿ ಅಲ್ಯುಮಿನಿಯಮ್‌ ಪಾತ್ರೆಗಳ ಬಳಕೆ ಮಾಡುತ್ತಿರುವುದನ್ನು ಗಮನಿಸಲಾಗಿದೆ. ಅಲ್ಯುಮಿನಿಯಂ ಪಾತ್ರೆಗಳ ಬಳಕೆ ಆರೋಗ್ಯದ ದೃಷ್ಟಿಯಿಂದ ಉತ್ತಮವಲ್ಲ ಎಂಬ ಕಾರಣಕ್ಕೆ ಅಲ್ಯುಮಿನಿಯಮ್‌ಗೆ ಪರ್ಯಾಯವಾಗಿ ರಾಜ್ಯದ ಸುಮಾರು 65000ಸರ್ಕಾರಿ ಶಾಲೆಗಳಿಗೆ ಗುಣಮಟ್ಟದ ಪಾತ್ರೆಗಳನ್ನು ಒದಗಿಸಲು ಉದ್ದೇಶಿಸಲಾಗಿದೆ. ನೆಲದ ಮೇಲೆ ಕುಳಿತುಕೊಳ್ಳುವ ಶಾಲೆಗಳಿಗೆ ಬೆಂಚ್‌ಗಳನ್ನು ಪೂರೈಸಲು ಉದ್ದೇಶಿಸಲಾಗಿದ್ದು, ಅಂತಹ ಶಾಲೆಗಳ ಯಾದಿಯನ್ನು ಸಲ್ಲಿಸುವಂತೆ ಸೂಚಿಸಿದ ಅವರು, ಶಿಥಿಲಗೊಂಡಿರುವ ಅಡುಗೆ ಕೋಣೆಗಳ ದುರಸ್ತಿ ಹಾಗೂ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಅಗತ್ಯ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳಲು ಸೂಚಿಸಲಾಗಿದೆ. ದಿನೇದಿನೇ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೋಲಾರ್‌ ವಿದ್ಯುತ್‌ ಉತ್ಪಾದಿಸಿ ಬಳಸಲು ಪ್ರೇರೇಪಿಸಲಾಗುತ್ತಿದೆ. ಒಂದು ಬಾರಿಯ ಹೂಡಿಕೆಯಿಂದ ವಿದ್ಯುತ್‌ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.
ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ರೈತರ ಅಗತ್ಯಗಳಿಗಾಗಿ ರಸಗೊಬ್ಬರ, ಬಿತ್ತನೆಬೀಜ ಹಾಗೂ ರಸಾಯನಿಕಗಳನ್ನು ದಾಸ್ತಾನು ಮಾಡಿಟ್ಟುಕೊಂಡು ಅಗತ್ಯಕ್ಕೆ ತಕ್ಕಂತೆ ರೈತರಿಗೆ ಒದಗಿಸಲು ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಲಜೀವನ ಮಿಷನ್‌ ಯೋಜನೆಯಡಿ ಹೆಚ್ಚುವರಿ ಕಾಮಗಾರಿಗಾಗಿ ಅಗತ್ಯವಿರುವ 2.00ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಜನಪ್ರಿಯವಾಗಿರುವ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನದ ಕುರಿತು ಕಾಲಕಾಲಕ್ಕೆ ಸಭೆಗಳನ್ನು ನಡೆಸಿ, ಮಾಧ್ಯಮಗಳಿಗೆ ವಿವರಿಸುವಂತೆ ತಹಶೀಲ್ದಾರರಿಗೆ ಸೂಚಿಸಿದ ಸಚಿವರು, ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ವಾಸ್ತವ ಸಂಗತಿಗಳ ಕುರಿತು ಮನವರಿಕೆ ಮಾಡಿಕೊಡಬೇಕು. ಅಲ್ಲದೇ ತಮ್ಮ ತೆರಿಗೆ ಹಣ ಸದ್ಭಳಕೆಯಾಗುತ್ತಿರುವ ಬಗ್ಗೆ ಜನರಿಗೆ ತಿಳಿಸಬೇಕು ಎಂದವರು ನುಡಿದರು.
ತಾಲೂಕಿನ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ ವಿದ್ಯಾರ್ಥಿಗಳಿಂದ ಆಗಾಗ್ಗೆ ದೂರುಗಳು ಬರುತ್ತಿವೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ವಸತಿ ನಿಲಯಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸುವ ಅಗತ್ಯವಿದೆ ಎಂದರು.
2015ರ ಹಿಂದೆ ಅರಣ್ಯ ಅಥವಾ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಶೀಘ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಈ ನಿರ್ಧಾರ ಬರುವವರೆಗೆ ಅಧಿಕಾರಿಗಳು ಒಕ್ಕಲೆಬ್ಬಿಸದಂತೆ ಸೂಚಿಸಿದ ಅವರು, 2015ರಿಂದೀಚೆಗೆ ಸಾಗುವಳಿ ಮಾಡುತ್ತಿರುವವರ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಅವರು, ಬೆಳೆದ ಪೈರು ಅಥವಾ ಬೆಳೆಯನ್ನು ನಾಶಪಡಿಸದಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದ ಅವರು ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ವ್ಯವಹರಿಸುವಂತೆ ಸೂಚಿಸಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಗುತ್ತಿಗೆದಾರರು ಸಕಾಲದಲ್ಲಿ ವೇತನ ಪಾವತಿಸಬೇಕು. ತಪ್ಪಿದಲ್ಲಿ ಅಂತಹ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಬೇಕು. ನೇಮಕಾತಿಯಲ್ಲಿಯೂ ಸ್ಥಳೀಯರಿಗೆ ಪ್ರಾಧಾನ್ಯತೆ ನೀಡುವಂತೆ ಅವರು ಸೂಚಿಸಿದರು.
ನರೇಗಾ ಯೋಜನೆಯಡಿ ಮಾನವದಿನಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಕಾಂಪೌಂಡ್‌ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳು ಪ್ರಸ್ತಾವನೆ ಸಿದ್ದಪಡಿಸಿ, ಅನುಮೋದನೆ ಪಡೆದು ಕಾಮಗಾರಿಗಳನ್ನು ನಡೆಸಬೇಕು. ಇದರಿಂದಾಗಿ ಹೆಚ್ಚಿನ ಜನರಿಗೆ ಕೂಲಿ ಕೆಲಸ ದೊರೆಯಲಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಕೊಳವೆಬಾವಿ ಕೊರೆಸಿಕೊಡುವ ಕಾರ್ಯ ಪೂರ್ಣಗೊಂಡಿಲ್ಲ. ಈ ಬಗ್ಗೆ ಸಂಬಂಧಿಸಿದ ನಿಗಮದ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದರು.
ಅಲ್ಲದೇ ಇದೇ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಪರಿಸರ, ಕೃಷಿ ಸಂಬಂಧಿತ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ತಹಶೀಲ್ದಾರ್‌ ಶ್ರೀಮತಿ ಮಂಜುಳಾ ಹೆಗಡಾಳ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಜಿ.ಶಶಿಧರ್‌, ಸೇರಿದಂತೆ ಕೆ.ಡಿ.ಪಿ.ಸಲಹಾ ಸಮಿತಿಯ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News
  • United States+1
  • United Kingdom+44
  • Afghanistan+93
  • Albania+355
  • Algeria+213
  • American Samoa+1
  • Andorra+376
  • Angola+244
  • Anguilla+1
  • Antigua & Barbuda+1
  • Argentina+54
  • Armenia+374
  • Aruba+297
  • Ascension Island+247
  • Australia+61
  • Austria+43
  • Azerbaijan+994
  • Bahamas+1
  • Bahrain+973
  • Bangladesh+880
  • Barbados+1
  • Belarus+375
  • Belgium+32
  • Belize+501
  • Benin+229
  • Bermuda+1
  • Bhutan+975
  • Bolivia+591
  • Bosnia & Herzegovina+387
  • Botswana+267
  • Brazil+55
  • British Indian Ocean Territory+246
  • British Virgin Islands+1
  • Brunei+673
  • Bulgaria+359
  • Burkina Faso+226
  • Burundi+257
  • Cambodia+855
  • Cameroon+237
  • Canada+1
  • Cape Verde+238
  • Caribbean Netherlands+599
  • Cayman Islands+1
  • Central African Republic+236
  • Chad+235
  • Chile+56
  • China+86
  • Christmas Island+61
  • Cocos (Keeling) Islands+61
  • Colombia+57
  • Comoros+269
  • Congo - Brazzaville+242
  • Congo - Kinshasa+243
  • Cook Islands+682
  • Costa Rica+506
  • Croatia+385
  • Cuba+53
  • Curaçao+599
  • Cyprus+357
  • Czech Republic+420
  • Côte d’Ivoire+225
  • Denmark+45
  • Djibouti+253
  • Dominica+1
  • Dominican Republic+1
  • Ecuador+593
  • Egypt+20
  • El Salvador+503
  • Equatorial Guinea+240
  • Eritrea+291
  • Estonia+372
  • Eswatini+268
  • Ethiopia+251
  • Falkland Islands+500
  • Faroe Islands+298
  • Fiji+679
  • Finland+358
  • France+33
  • French Guiana+594
  • French Polynesia+689
  • Gabon+241
  • Gambia+220
  • Georgia+995
  • Germany+49
  • Ghana+233
  • Gibraltar+350
  • Greece+30
  • Greenland+299
  • Grenada+1
  • Guadeloupe+590
  • Guam+1
  • Guatemala+502
  • Guernsey+44
  • Guinea+224
  • Guinea-Bissau+245
  • Guyana+592
  • Haiti+509
  • Honduras+504
  • Hong Kong+852
  • Hungary+36
  • Iceland+354
  • India+91
  • Indonesia+62
  • Iran+98
  • Iraq+964
  • Ireland+353
  • Isle of Man+44
  • Israel+972
  • Italy+39
  • Jamaica+1
  • Japan+81
  • Jersey+44
  • Jordan+962
  • Kazakhstan+7
  • Kenya+254
  • Kiribati+686
  • Kosovo+383
  • Kuwait+965
  • Kyrgyzstan+996
  • Laos+856
  • Latvia+371
  • Lebanon+961
  • Lesotho+266
  • Liberia+231
  • Libya+218
  • Liechtenstein+423
  • Lithuania+370
  • Luxembourg+352
  • Macau+853
  • Madagascar+261
  • Malawi+265
  • Malaysia+60
  • Maldives+960
  • Mali+223
  • Malta+356
  • Marshall Islands+692
  • Martinique+596
  • Mauritania+222
  • Mauritius+230
  • Mayotte+262
  • Mexico+52
  • Micronesia+691
  • Moldova+373
  • Monaco+377
  • Mongolia+976
  • Montenegro+382
  • Montserrat+1
  • Morocco+212
  • Mozambique+258
  • Myanmar (Burma)+95
  • Namibia+264
  • Nauru+674
  • Nepal+977
  • Netherlands+31
  • New Caledonia+687
  • New Zealand+64
  • Nicaragua+505
  • Niger+227
  • Nigeria+234
  • Niue+683
  • Norfolk Island+672
  • North Korea+850
  • North Macedonia+389
  • Northern Mariana Islands+1
  • Norway+47
  • Oman+968
  • Pakistan+92
  • Palau+680
  • Palestine+970
  • Panama+507
  • Papua New Guinea+675
  • Paraguay+595
  • Peru+51
  • Philippines+63
  • Poland+48
  • Portugal+351
  • Puerto Rico+1
  • Qatar+974
  • Romania+40
  • Russia+7
  • Rwanda+250
  • Réunion+262
  • Samoa+685
  • San Marino+378
  • Saudi Arabia+966
  • Senegal+221
  • Serbia+381
  • Seychelles+248
  • Sierra Leone+232
  • Singapore+65
  • Sint Maarten+1
  • Slovakia+421
  • Slovenia+386
  • Solomon Islands+677
  • Somalia+252
  • South Africa+27
  • South Korea+82
  • South Sudan+211
  • Spain+34
  • Sri Lanka+94
  • St Barthélemy+590
  • St Helena+290
  • St Kitts & Nevis+1
  • St Lucia+1
  • St Martin+590
  • St Pierre & Miquelon+508
  • St Vincent & Grenadines+1
  • Sudan+249
  • Suriname+597
  • Svalbard & Jan Mayen+47
  • Sweden+46
  • Switzerland+41
  • Syria+963
  • São Tomé & Príncipe+239
  • Taiwan+886
  • Tajikistan+992
  • Tanzania+255
  • Thailand+66
  • Timor-Leste+670
  • Togo+228
  • Tokelau+690
  • Tonga+676
  • Trinidad & Tobago+1
  • Tunisia+216
  • Turkey+90
  • Turkmenistan+993
  • Turks & Caicos Islands+1
  • Tuvalu+688
  • US Virgin Islands+1
  • Uganda+256
  • Ukraine+380
  • United Arab Emirates+971
  • United Kingdom+44
  • United States+1
  • Uruguay+598
  • Uzbekistan+998
  • Vanuatu+678
  • Vatican City+39
  • Venezuela+58
  • Vietnam+84
  • Wallis & Futuna+681
  • Western Sahara+212
  • Yemen+967
  • Zambia+260
  • Zimbabwe+263
  • Åland Islands+358

Popular

More like this
Related

Sri Adichunchanagiri Education Trust ಬಿಜಿಎಸ್ ಪಿಯು ವಾಣಿಜ್ಯ ಕಾಲೇಜಿಗೆ ಶೇ 100 ಫಲಿತಾಂಶ

Sri Adichunchanagiri Education Trust ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್...

Department of Science and Technology ಹೊಳಲೂರು ಏತ ನೀರಾವರಿಗೆ ₹ 4.8 ಕೋಟಿ ಬಜೆಟ್ ನಿಗದಿಮಾಡಿದ ಸಚಿವರ ಕ್ರಮಕ್ಕೆ ರೈತರ ಕೃತಜ್ಞತೆ

Department of Science and Technology ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ಶಿವಮೊಗ್ಗ...

Sri Shankaracharya Jayanti ಮೇ 2. ಭಕ್ತಿಪೂರ್ವಕ ಶಂಕರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸರ್ವ ಸಿದ್ಧತೆ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...

Akshaya Tritiya ಅಕ್ಷಯ ತೃತೀಯ, ಕೆಲವು ಸಾಮಾಜಿಕ ಆತಂಕಗಳು

Akshaya Tritiya ಅಕ್ಷಯ ತೃತೀಯ ಎಂದರೆ ಬಂಗಾರ ಖರೀದಿಗೆ, ಗೃಹ ಪ್ರವೇಶ,...