Monday, February 2, 2026
Monday, February 2, 2026

Karnataka Janapada Academy ಜಾನಪದ ಅಕಾಡೆಮಿಯಿಂದ 2024 ನೇ ಸಾಲಿನ ಪ್ರಥಮ‌ ಆವೃತ್ತಿ‌ಯುಳ್ಳ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

Date:

Karnataka Janapada Academy ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ ದಿನಾಂಕ:01.01.2024 ರಿಂದ 31.12.2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಪದ್ಯ ಹಾಗೂ ಜನಪದ ಸಂಕೀರ್ಣ ಎಂಬ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಲೇಖಕರು/ ಪ್ರಕಾಶಕರು/ ಸಂಪಾದಕರುಗಳು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಮೇ 20 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್‌ರವರು ತಿಳಿಸಿದ್ದಾರೆ.

Karnataka Janapada Academy ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.

ವಿ.ಸೂ – ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು / ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದಾಗಿ ಕೋರಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22215509 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...