Union Public Service Commission ಶಿವಮೊಗ್ಗದ ಬಸವೇಶ್ವರ ನಗರ ನಿವಾಸಿ ವೃತ್ತಿಯಲ್ಲಿ ವಕೀಲರಾದ ಶ್ರೀ ಮೋಹನ್ ಕುಮಾರ್ ಅವರು ಹಾಗೂ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಶ್ರೀಮತಿ ವತ್ಸಲ ಅವರ ಸುಪುತ್ರಿ ಕು|| ಮೇಘನಾ ಅವರು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್(UPSಅ) ಪರೀಕ್ಷೆಯಲ್ಲಿ 425ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿದ್ದು, ಅವರ ಸ್ವಗೃಹಕ್ಕೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ್ ಹಾಗೂ ಭದ್ರಾವತಿಯ ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.
Union Public Service Commission ಈ ಸಂದರ್ಭದಲ್ಲಿ ಜಿಲ್ಲಾ ಯುವ ಜನತಾ ದಳದ ಅಧ್ಯಕ್ಷ ಮಧುಕುಮಾರ್, ಜೆಡಿಎಸ್ ಕಾರ್ಯದರ್ಶಿ ರಾಕೇಶ್ ಡಿಸೋಜಾ, ಜಿಲ್ಲಾ ಯುವ ಜನತಾ ದಳದ ಕಾರ್ಯ ಅಧ್ಯಕ್ಷ ಎಸ್. ಎಲ್. ನಿಖಿಲ್ ಮತ್ತು ಕಾರ್ಯದರ್ಶಿ ಪ್ರೇಮ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Union Public Service Commission ಐಎಎಸ್ ಟಾಪರ್ ಮೇಘನಾ ಗೆ ಅಭಿನಂದಿಸಿದ ಶಾಸಕಿ ಶಾರದಾ ಪೂರ್ಯಾನಾಯಕ್
Date: