Monday, February 2, 2026
Monday, February 2, 2026

SRNM College ಯುವಜನರು ರಕ್ತದಾನದ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು-ಡಾ.ಕೆ.ಎಲ್.ಅರವಿಂದ್

Date:

SRNM College ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ, ಕೇವಲ ಒಂದು ಯುನಿಟ್ ರಕ್ತ ನಾಲ್ಕು ಜನರ ಜೀವವನ್ನು ಉಳಿಸಬಲ್ಲದು, ರಕ್ತವನ್ನು ಕೃತಕವಾಗಿ ತಯಾರಿಸಲು ಇನ್ನೂ ಸಾಧ್ಯವಾಗಿಲ್ಲದ ಕಾರಣ ರಕ್ತಕ್ಕೆ ಬಹಳ ಬೇಡಿಕೆ ಇದೆ. ಯುವಜನರು ಈ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಎಲ್.ಅರವಿಂದ ಕರೆ ನೀಡಿದರು.

ಇಂದು ಬೆಳಿಗ್ಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಸ್.ಆರ್.ಎನ್.ಎಂ. ಕಾಲೇಜಿನ ಗ್ರಂಥಾಲಯದ ಆವರಣದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ವತಿಯಿಂದ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಕಾಲೇಜಿನ ವತಿಯಿಂದ ರಕ್ತದಾನ ಶಿಬಿರ ಹಾಗೂ ರಕ್ತದ ಗುಂಪು ತಪಾಸಣೆ ಸೇರಿದಂತೆ ಅನೇಕ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ಯುವಜನರು ಈ ಮಹತ್ಕಾರ್ಯಕ್ಕೆ ಹೆಚ್ಚು ಆಸಕ್ತಿಯಿಂದ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ರಾಷ್ಟೀಯ ಶಿಕ್ಷಣ ಸಮಿತಿಯ ನಿರ್ದೇಶಕರಾದ ಅಶ್ವಥ ನಾರಾಯಣ ಶೆಟ್ಟಿ ಇವರ ರಕ್ತ ದಾನದ ಮಹತ್ವ ತಿಳಿಸಿ ವಿದ್ಯಾರ್ಥಿಗಳ ಉತ್ಸಾಹ ವನ್ನು ಪ್ರಶಂಸಿಸಿದರು.

SRNM College ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನದಿಂದ ಹೃದಯಾಘಾತ ಕಡಿಮೆ ಆಗುವುದರ ಜೊತೆಗೆ ದೇಹದಲ್ಲಿ ರಕ್ತದಾನದಿಂದ ಕೊಬ್ಬಿನಾಂಶ ಹೊರಹೋಗುವುದರಿಂದ ಸದಾ ಲವಲವಿಕೆಯಿಂದ ಇರಲು ಅನುಕೂಲವಾಗುತ್ತದೆ. ಜೊತೆಗೆ ದೀರ್ಘಾಯುಷ್ಯವುಳ್ಳವರಾಗಿರುತ್ತಾರೆ. ಜಿಲ್ಲೆಯಲ್ಲಿ ರಕ್ತದ ಕೊರತೆ ತುಂಬಾ ಹೆಚ್ಚಾಗಿದ್ದು, ಇದನ್ನು ನೀಗಿಸಲು ಯುವಕರು ರಕ್ತದಾನ ಮಾಡುವುದರಲ್ಲಿ ಮುಂದಾಗಬೇಕು. ಮೂಢನಂಬಿಕೆಯಿಂದ ಹೊರ ಬಂದು ರಕ್ತದಾನ ಮಾಡಬೇಕು ಎಂದು ನುಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ರಕ್ತದ ಗುಂಪು ತಪಾಸಣೆ ಹಾಗೂ ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಈ ರಕ್ತದಾನ ಶಿಬಿರದಲ್ಲಿ 118ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್, ಎನ್.ಎಸ್.ಎಸ್. ಘಟಕದ ಡಾ. ಲಕ್ಷ್ಮಣ.ಕೆ, ಮಂಜುನಾಥ.ಕೆ, ಯುವ ರೆಡ್‍ಕ್ರಾಸ್ ಘಟಕದ ಡಾ. ನಾಗರಾಜ.ಕೆ.ಎಸ್, ಉಪನ್ಯಾಸಕರಾದ ಡಾ. ಮುಕುಂದ.ಎಸ್, ಡಾ. ಪ್ರಶಿತ್ ಕೇಕುಡ.ಟಿ.ಆರ್, ಸಂಗೀದಾ ಬಾನು, ನಂದನ್, ಅಂಕಿತ್, ಶಿವಮೊಗ್ಗದ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ದಿನೇಶ್ ಹಾಗೂ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...