S.N. Channabasappa ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಹಲವಾರು ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು.
- ಮಳೆಹಾನಿ ಪರಿಹಾರ: ಕಳೆದ ವರ್ಷ ಶಿವಮೊಗ್ಗ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರು ತೀವ್ರ ಸಂಕಷ್ಟವನ್ನು ಅನುಭವಿಸಿದರು. ಈವರೆಗೂ ಯಾವುದೇ ರೀತಿಯ ಪರಿಹಾರ ಕೈಗೊಳ್ಳದಿರುವ ಕುರಿತು ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ, ತಕ್ಷಣ ಪರಿಹಾರದ ಕುರಿತು ಕ್ರಮ ಕೈಗೊಳ್ಳಲು ತಿಳಿಸಿದರು.
- ಮುಜರಾಯಿ ಆಸ್ತಿ: ಶಿವಮೊಗ್ಗ ಜಿಲ್ಲೆಯಲ್ಲಿ ಮುಜರಾಯಿ ಆಸ್ತಿಗಳ ಒತ್ತುವರಿ ಆಗಿರುವ ಬಗ್ಗೆ ಅಳತೆ ಮಾಡಿ ಒತ್ತುವರಿ ತೆರವು ಕಾರ್ಯ ಮಾಡಲು ಕಳೆದ ಸಭೆಯಲ್ಲಿ ಸೂಚಿಸಲಾಗಿತ್ತು. ಆದರೆ ಈವರೆಗೂ ಯಾವುದೇ ಒತ್ತುವರಿ ತೆರವು ಮಾಡಿಲ್ಲ ಇದಕ್ಕೆ ಸಂಬಂಧಿಸಿದಂತೆ ಹಿಂದೂ ದೇವಾಲಯಗಳ ಆಸ್ತಿ ಉಳಿಸಲು ಕ್ರಮ ಕೈಗೊಳ್ಳಲು ಸಭೆಯಲ್ಲಿ ಸೂಚಿಸಿದರು.
- ಮಹಿಳಾ ಪದವಿ ಕಾಲೇಜು ಜಾಗದ ಸಮಸ್ಯೆ: ಸರ್ಕಾರಿ ಮಹಿಳಾ ಪದವಿ ಕಾಲೇಜಿಗೆ ಜಾಗದ ಸಮಸ್ಯೆ ಇರುವುದರಿಂದ ಈ ಬಗ್ಗೆ ಬೇಕಾಗಿರುವಂತಹ ಅಗತ್ಯ ಕ್ರಮಗಳನ್ನು ಕೈಗೊಂಡು, ಕೂಡಲೇ ಸಮಸ್ಯೆ ಬಗೆಹರಿಸಲು ಸೂಚಿಸಿದರು.
- ಬೀದಿ ಜಾನುವಾರುಗಳ ಸಮಸ್ಯೆ: ಬೀದಿ ಹಸುಗಳು ಮತ್ತು ಜಾನುವಾರುಗಳ ಹಿತಕ್ಕಾಗಿ, ರೇಷ್ಮೆ ಇಲಾಖೆ ಹಾಗೂ ತಂಬಾಕು ಮಂಡಳಿ ವ್ಯಾಪ್ತಿಯಲ್ಲಿರುವ ಖಾಲಿ ಗೋದಾಮುಗಳನ್ನು ಗೋಶಾಲೆ ಬಳಕೆ ಮಾಡಲು ಅವಕಾಶ ನೀಡಬೇಕೆಂದು ಕೋರಿದರು.
- ವೈದ್ಯಕೀಯ ಸಂಸ್ಥೆಯ ಅವ್ಯವಸ್ಥೆ: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅವ್ಯವಸ್ಥೆ ಹಾಗೂ ಕರ್ಮಕಾಂಡಗಳ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳಲು ಆಗ್ರಹಿಸಿದರು.
- ಹೊಸ ಜಿಲ್ಲಾ ಆಸ್ಪತ್ರೆ ಅವಶ್ಯಕತೆ: ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಜಿಲ್ಲಾ ಆಸ್ಪತ್ರೆಯ ಅವಶ್ಯಕತೆ ಇದ್ದು, ಸರ್ಕಾರದಿಂದ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.