Friday, March 20, 2026
Friday, March 20, 2026

Rotary Club Shimoga ಸ್ತ್ರೀ ಸಮಾನತೆ, ಅಂತರ್ಜಾತೀಯ ವಿವಾಹ, ಕಾಯಕವೇ ಕೈಲಾಸ ತತ್ವಗಳ ಮೂಲಕ ಬಸವಣ್ಣ ಜನಪ್ರಿಯ- ಜಿ.ಕಿರಣ್ ಕುಮಾರ್

Date:

Rotary Club Shimoga ಬಸವಣ್ಣನವರ ವಚನ ತತ್ವಗಳು ಇಡೀ ವಿಶ್ವಕ್ಕೆ ನೀಡಿದ ಅತ್ಯಂತ ದೊಡ್ಡ ಸಂದೇಶವಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷರಾದ ಕಿರಣ್ ಕುಮಾರ್.ಜಿ ರವರು ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನಲ್ಲಿ ಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರು 12ನೇ ಶತಮಾನದ ಒಬ್ಬ ಮಹಾನ್ ಕವಿ, ಸಮಾಜ ಸುಧಾರಕ, ತತ್ವಜ್ಞಾನಿ. ಅವರು ವಚನಗಳ ಮೂಲಕ ಸಾಮಾಜಿಕ ಜಾಗೃತಿಯನ್ನು ಹರಡಲು ಪ್ರಾರಂಭಿಸಿದರು ಎಂದು ನುಡಿದರು.

Rotary Club Shimoga ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಸಂದೇಶ ನೀಡಿದ ಮಹಾನ್ ಮಾನವತಾವಾದಿಗಳು. ಸ್ತ್ರೀ ಸಮಾನತೆ, ಅಂತರ್ಜಾತಿ ವಿವಾಹ, ಕಾಯಕವೇ ಕೈಲಾಸ, ಜಾತ್ಯಾತೀತ ತತ್ವಗಳ ಮೂಲಕ ಜನಪ್ರಿಯರಾದವರು. ಬಸವಣ್ಣನವರು ಲಿಂಗ ತಾರತಮ್ಯ ಸಾಮಾಜಿಕ ತಾರತಮ್ಯ ಮೂಢನಂಬಿಕೆಗಳನ್ನು ನಿರಾಕರಿಸಿದವರು. ಜಾತಿ ಮತ ಲಿಂಗ ಭೇದವನ್ನು ತಿರಸ್ಕರಿಸಿದ್ದ ಅವರು, ಸಾಮಾಜಿಕ ಕ್ರಾಂತಿಗೆ ಕಾರಣವಾದವರು ವಿಶ್ವಗುರು ಬಸವಣ್ಣನವರು ಎಂದು ಹೇಳಿದರು.ಜಯಂತಿ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನ ಕಾರ್ಯದರ್ಶಿ ಈಶ್ವರ್, ಬಸವರಾಜ್.ಬಿ, ರವಿ ಕೋಟೊಜಿ, ಧರ್ಮೇಂದ್ರ ಸಿಂಗ್, ರಮೇಶ್.ಎನ್, ಗುರುರಾಜ್.ಎ.ಎಸ್, ಚಂದ್ರು.ಜೆ.ಪಿ, ನಟರಾಜ್, ವಿನುತಾ, ಅಶ್ವಿನ್, ಭರತ್.ಎಸ್.ಕೆ, ಕುಮಾರ್, ಅರುಣ್ ಕುಮಾರ್, ನಟರಾಜ್ ಮತ್ತು ಕ್ಲಬ್ ನ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...