Wednesday, December 17, 2025
Wednesday, December 17, 2025

Red Cross Organization ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ ಶ್ರವಣ ಸಾಧನ ವಿತರಣೆ

Date:

Red Cross Organization ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ 25 ಶ್ರಾವಣ ಸಾಧನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರ ಹಸ್ತದಿಂದ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ರೆಡ್ ಕ್ರಾಸ್ ಸಂಸ್ಥೆಯ ಸೇವೆಗಳನ್ನ ಗುರುತಿಸಿ ಅಭಿನಂದಿಸಿದರು. ಸಮಾಜದಲ್ಲಿ ನೂರಾರು ವರ್ಷಗಳಿಂದ ಮಾನವೀಯ ಸೇವೆಯನ್ನು ಮಾಡುತ್ತಿರುವ ರೆಡ್ ಕ್ರಾಸ್ ಸಂಸ್ಥೆ ಇಂದಿಗೂ ಸಹ ತನ್ನ ವಿಶೇಷ ಸೇವೆಗಳಿಂದ ಗುರುತಿಸಿಕೊಂಡಿದೆ ಎಂದು ನುಡಿದರು.

ಕಾರ್ಯದರ್ಶಿ ಡಾ. ದಿನೇಶ್ ಮಾತನಾಡಿ, ಈಗ 25 ಶ್ರವಣ ಸಾಧನ ನೀಡಿದ್ದು, ಬರುವ ದಿನಗಳಲ್ಲಿ ಇನ್ನೂ 25 ಶ್ರವಣ ಸಾಧನಗಳಿಗೆ ಬೇಡಿಕೆ ಇದೆ. ಅದನ್ನು ಕೂಡಲೇ ವಿತರಿಸಲಾಗುವುದು ಎಂದು ನುಡಿದರು.

Red Cross Organization ಹಾಗೆ ಈಗಾಗಲೇ ವೀಲ್ ಚೇರ್ ಗಳನ್ನು ಮತ್ತು ಅಂಗವಿಕಲರ ಸಾಧನ ಸಾಮಗ್ರಿಗಳನ್ನು, ಕರೋನಾ ಸಂದರ್ಭದಲ್ಲಿ ಫುಡ್ ಕಿಟ್ ಗಳನ್ನು ವಿತರಣೆ ಮಾಡಿರುವುದನ್ನು ನೆನಪಿಸಿದರು.

ಸಮಾರಂಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ರೆಡ್ ರೆಡ್ ಕ್ರಾಸ್ ಮಾಜಿ ಸಭಾಪತಿಗಳಾದ ಅಶ್ವತ್ ನಾರಾಯಣ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಬಲ್ಕಿಶ್ ಬಾನು, ಭಾರತಿ ಚಂದ್ರಶೇಖರ್, ಭಾರತೀ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ರೆಡ್ ಕ್ರಾಸ್ ನಿರ್ದೇಶಕರಾದ ನವೀನ್ ಹಾಗೂ ಎಸ್ ಪಿ ಮಿಥುನ್ ಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...