Thursday, March 19, 2026
Thursday, March 19, 2026

Red Cross Organization ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ ಶ್ರವಣ ಸಾಧನ ವಿತರಣೆ

Date:

Red Cross Organization ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ 25 ಶ್ರಾವಣ ಸಾಧನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರ ಹಸ್ತದಿಂದ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ರೆಡ್ ಕ್ರಾಸ್ ಸಂಸ್ಥೆಯ ಸೇವೆಗಳನ್ನ ಗುರುತಿಸಿ ಅಭಿನಂದಿಸಿದರು. ಸಮಾಜದಲ್ಲಿ ನೂರಾರು ವರ್ಷಗಳಿಂದ ಮಾನವೀಯ ಸೇವೆಯನ್ನು ಮಾಡುತ್ತಿರುವ ರೆಡ್ ಕ್ರಾಸ್ ಸಂಸ್ಥೆ ಇಂದಿಗೂ ಸಹ ತನ್ನ ವಿಶೇಷ ಸೇವೆಗಳಿಂದ ಗುರುತಿಸಿಕೊಂಡಿದೆ ಎಂದು ನುಡಿದರು.

ಕಾರ್ಯದರ್ಶಿ ಡಾ. ದಿನೇಶ್ ಮಾತನಾಡಿ, ಈಗ 25 ಶ್ರವಣ ಸಾಧನ ನೀಡಿದ್ದು, ಬರುವ ದಿನಗಳಲ್ಲಿ ಇನ್ನೂ 25 ಶ್ರವಣ ಸಾಧನಗಳಿಗೆ ಬೇಡಿಕೆ ಇದೆ. ಅದನ್ನು ಕೂಡಲೇ ವಿತರಿಸಲಾಗುವುದು ಎಂದು ನುಡಿದರು.

Red Cross Organization ಹಾಗೆ ಈಗಾಗಲೇ ವೀಲ್ ಚೇರ್ ಗಳನ್ನು ಮತ್ತು ಅಂಗವಿಕಲರ ಸಾಧನ ಸಾಮಗ್ರಿಗಳನ್ನು, ಕರೋನಾ ಸಂದರ್ಭದಲ್ಲಿ ಫುಡ್ ಕಿಟ್ ಗಳನ್ನು ವಿತರಣೆ ಮಾಡಿರುವುದನ್ನು ನೆನಪಿಸಿದರು.

ಸಮಾರಂಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ರೆಡ್ ರೆಡ್ ಕ್ರಾಸ್ ಮಾಜಿ ಸಭಾಪತಿಗಳಾದ ಅಶ್ವತ್ ನಾರಾಯಣ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಬಲ್ಕಿಶ್ ಬಾನು, ಭಾರತಿ ಚಂದ್ರಶೇಖರ್, ಭಾರತೀ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ರೆಡ್ ಕ್ರಾಸ್ ನಿರ್ದೇಶಕರಾದ ನವೀನ್ ಹಾಗೂ ಎಸ್ ಪಿ ಮಿಥುನ್ ಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...