Thursday, June 18, 2026
Thursday, June 18, 2026

Red Cross Organization ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ ಶ್ರವಣ ಸಾಧನ ವಿತರಣೆ

Date:

Red Cross Organization ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ 25 ಶ್ರಾವಣ ಸಾಧನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರ ಹಸ್ತದಿಂದ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ರೆಡ್ ಕ್ರಾಸ್ ಸಂಸ್ಥೆಯ ಸೇವೆಗಳನ್ನ ಗುರುತಿಸಿ ಅಭಿನಂದಿಸಿದರು. ಸಮಾಜದಲ್ಲಿ ನೂರಾರು ವರ್ಷಗಳಿಂದ ಮಾನವೀಯ ಸೇವೆಯನ್ನು ಮಾಡುತ್ತಿರುವ ರೆಡ್ ಕ್ರಾಸ್ ಸಂಸ್ಥೆ ಇಂದಿಗೂ ಸಹ ತನ್ನ ವಿಶೇಷ ಸೇವೆಗಳಿಂದ ಗುರುತಿಸಿಕೊಂಡಿದೆ ಎಂದು ನುಡಿದರು.

ಕಾರ್ಯದರ್ಶಿ ಡಾ. ದಿನೇಶ್ ಮಾತನಾಡಿ, ಈಗ 25 ಶ್ರವಣ ಸಾಧನ ನೀಡಿದ್ದು, ಬರುವ ದಿನಗಳಲ್ಲಿ ಇನ್ನೂ 25 ಶ್ರವಣ ಸಾಧನಗಳಿಗೆ ಬೇಡಿಕೆ ಇದೆ. ಅದನ್ನು ಕೂಡಲೇ ವಿತರಿಸಲಾಗುವುದು ಎಂದು ನುಡಿದರು.

Red Cross Organization ಹಾಗೆ ಈಗಾಗಲೇ ವೀಲ್ ಚೇರ್ ಗಳನ್ನು ಮತ್ತು ಅಂಗವಿಕಲರ ಸಾಧನ ಸಾಮಗ್ರಿಗಳನ್ನು, ಕರೋನಾ ಸಂದರ್ಭದಲ್ಲಿ ಫುಡ್ ಕಿಟ್ ಗಳನ್ನು ವಿತರಣೆ ಮಾಡಿರುವುದನ್ನು ನೆನಪಿಸಿದರು.

ಸಮಾರಂಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ರೆಡ್ ರೆಡ್ ಕ್ರಾಸ್ ಮಾಜಿ ಸಭಾಪತಿಗಳಾದ ಅಶ್ವತ್ ನಾರಾಯಣ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಬಲ್ಕಿಶ್ ಬಾನು, ಭಾರತಿ ಚಂದ್ರಶೇಖರ್, ಭಾರತೀ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ರೆಡ್ ಕ್ರಾಸ್ ನಿರ್ದೇಶಕರಾದ ನವೀನ್ ಹಾಗೂ ಎಸ್ ಪಿ ಮಿಥುನ್ ಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...