Monday, March 30, 2026
Monday, March 30, 2026

Labor Day ಗಿಗ್ ಕಾರ್ಮಿಕರೊಂದಿಗೆ ವಿಶಿಷ್ಟವಾಗಿ ಯುವ ಕಾಂಗ್ರೆಸ್ ನಿಂದ ಕಾರ್ಮಿಕ ದಿನಾಚರಣೆ

Date:

Labor Day ಕಾರ್ಮಿಕ ದಿನಾಚರಣೆ ಅಂಗವಾಗಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ನಗರದ ಬ್ಲಿಂಕ್ ಇಟ್ , ಫ್ಲಿಪ್ ಕರ್ಟ್ , ಸ್ವಿಗ್ಗಿ ಜೋಮೋಟೊ ಅಮೆಜಾನ್ ಹೊಮ್ ಡೆಲಿವರಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಡೆಲಿವರಿ ಬಾಯ್ಸ್ ಗೀಗ್ ಕಾರ್ಮಿಕರಿಗೆ ಸಿಹಿ ಹಂಚಿಕಾರ್ಮಿಕ ದಿನಾಚರಣೆಯ ಶುಭಾಶಯಗಳು ಕೋರಲಾಯಿತು. ಭಾರತ್ ಜೋಡೊ.ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಗೀಗ್ ಕಾರ್ಮಿಕರೊಂದಿಗೆ ನಡೆಸಿದ ಸಂವಾದದಲ್ಲಿ ಕಾರ್ಮಿಕರ ಸಮ್ಮುಖದಲ್ಲಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಈ ಮಂಡಳಿಯನ್ನು ಸ್ಥಾಪಿಸಬೇಕೆಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಅವರು ತಿಳಿಸಿದಂತೆ ಕೊಟ್ಟ ಮಾತಿನಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗೀಗ್ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸ್ಥಾಪಿಸುವ ಮುಖಾಂತರ ನುಡಿದಂತೆ ನಡೆದ ಸರ್ಕಾರವಾಗಿದ್ದು, ಕಲ್ಯಾಣ ಮಂಡಳಿಯನ್ನು ಘೋಷಣೆ ಮಾಡಿದ ರಾಜ್ಯದ ಮುಖ್ಯಮಂತ್ರಿಗಳಿಗೆ ಉಪಮುಖ್ಯಮಂತ್ರಿಗಳಿಗೆ ಹಾಗೂ ಕಾರ್ಮಿಕ ಕಲ್ಯಾಣ ಸಚಿವರಾದ ಸಂತೋಷ್ ಲಾಡ್ ರವರಿಗೆ ಅಭಿನಂದಿಸಿ ಎಲ್ಲ ಕಾರ್ಮಿಕರಿಗೂ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಲಾಯಿತು. Labor Day ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಳಾದ ಕೆ ರಂಗನಾಥ್, ಡಾ.ದಿನೇಶ್ ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್‌.ಪಿ ಗಿರೀಶ್, ಪಂಚ ಗ್ಯಾರಂಟಿ ಸದಸ್ಯ ಎಸ್ ಕುಮಾರೇಶ್, ಯುವ ಕಾಂಗ್ರೆಸ್ ನ ಪದಾಧಿಕಾರಿಗಳಾದ ಕೆ ಎಲ್ ಪವನ್, ಟಿ ಗುರುಪ್ರಸಾದ್, ರಾಜೇಶ್ ಮಂದಾರ, ಜಿ.ಕಿರಣ್ ಕುಮಾರ್, ಎಸ್ ಜಿ ಮಿಥುನ್, ಆರ್ ಕಿರಣ್, ಎಸ್ ಎಸ್ ಶರತ್, ಸಂಜಯ್, ಮಂಜುನಾಥ್ ಹಾಗೂ ಇತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...