Thursday, June 18, 2026
Thursday, June 18, 2026

Soraba News ಸೊರಬ ನಗರದಲ್ಲಿ ಮಳೆಯಿಂದ ಜನಕ್ಕೆ ಅನಾನುಕೂಲತೆ ಪರಿಶೀಲಿಸಿದ ಪುರಸಭಾಧ್ಯಕ್ಷ ಪ್ರಭು ಮೇಸ್ತ್ರಿ

Date:

Soraba News ಸೊರಬ ಪಟ್ಟಣದಲ್ಲಿ ಶನಿವಾರ ಬೆಳಗ್ಗೆ ಎಡಬಿಡದೇ ಸುರಿದ ಮಳಿಯಿಂದಾಗಿ ರಸ್ತೆಯಲ್ಲಿ ನೀರು ನಿಂತು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾದ ಪ್ರದೇಶಗಳಿಗೆ ಪುರಸಭೆ ಅಧ್ಯಕ್ಷ ಪ್ರಭು ಮಸ್ತಿಷ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದ ಮುಂಭಾಗ, ಸಾಗರ ರಸ್ತೆಯ ಲಯನ್ಸ್ ಕ್ಲಬ್ ಹಾಗೂ ಹಳೇ ಬಿಇಓ ಕಚೇರಿ ಮುಂಭಾಗದ ಚರಂಡಿಯಲ್ಲಿ ಹೂಳು ತುಂಬಿದೆ. ಇದರಿಂದ ಮಳೆ ಬಂದ ತಕ್ಷಣ ನೀರು ರಸ್ತೆ ಸೇರುತ್ತದೆ ಕೂಡಲೇ ಅಧಿಕಾರಿಗಳು ಹೂಳು ತಗೆಸಬೇಕು ಎಂದು ಸೂಚನೆ ನೀಡಿದರು.
ಮುಖ್ಯರಸ್ತೆಯ ನಿಸಾರ್ ಪಾನ್ ಶಾಪ್ ಎದುರು ಹಾಗೂ ಪಂಚಾನನ ಸ್ಟೋರ್, ಸಂತೋಷ್ ಡಿಪಾರ್ಟೆ್ಮಂಟ್ ಸ್ಟೋರ್ ಮುಂಭಾಗ ರಸ್ತೆಯಲ್ಲಿ ಮಳೆ ಬಂದರೆ ನೀರು ಸಮರ್ಪಕವಾಗಿ ಚರಂಡಿ ಸೇರುತ್ತಿಲ್ಲ ಎಂದು ಸಾರ್ವಜನಿಕ ದೂರಿದರು. ಈ ವೇಳೆ ಪ್ರತಿಕ್ರಿಯಿಸಿದ ಪುರಸಭೆ ಅಧ್ಯಕ್ಷರು, ಬಾಕ್ಸ್ ಚರಂಡಿಗೆ ನೀರು ಸೇರುವಂತೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಜೊತೆಗೆ ಪಟ್ಟಣದ ಸ್ವಚ್ಛತೆ ಮತ್ತು ಮೂಲ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು. ಮಳೆಗಾಲ ಸಮೀಪಿಸುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
Soraba News ಈ ಸಂದರ್ಭದಲ್ಲಿ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಎಸ್. ರಣಜಿತ್ ಕುಮಾರ್, ಆರೋಗ್ಯ ನಿರೀಕ್ಷಕ ಎ.ಎನ್. ರವಿಕುಮಾರ್, ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಉಪಾಧ್ಯಕ್ಷ ದತ್ತಾ ಸೊರಬ ಸೇರಿದಂತೆ ಪುರಸಭೆ ಸಿಬ್ಬಂದಿ ಇದ್ದರು.
ಸೊರಬ ಪಟ್ಟಣದಲ್ಲಿ ಎಡಬಿಡದೇ ಸುರಿದ ಮಳಿಯಿಂದಾಗಿ ರಸ್ತೆಯಲ್ಲಿ ನೀರು ನಿಂತು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾದ ಪ್ರದೇಶಗಳಿಗೆ ಪುರಸಭೆ ಅಧ್ಯಕ್ಷ ಪ್ರಭು ಮೇಸ್ತಿçà ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...