Saturday, May 24, 2025
Saturday, May 24, 2025

CM Siddaramaiah ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಸಾಧಿಸಿರುವ ತಾಲ್ಲೂಕುಗಳನ್ನ ಗುರುತಿಸಿ ಗುಣಮಟ್ಟ ಸುಧಾರಣೆಗೆ ಗಮನ- ಸಿದ್ಧರಾಮಯ್ಯ.

Date:

CM Siddaramaiah ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅಭಿನಂದನೆಗಳು. ಕಳೆದ ಬಾರಿಗೆ ಹೋಲಿಕೆ ಮಾಡಿದಲ್ಲಿ ಈ ಬಾರಿಯ ಫಲಿತಾಂಶ 8℅ ಪ್ರಗತಿ ಸಾಧಿಸಿದೆ ಎನ್ನುವುದು ಸಂತಸದ ವಿಚಾರ.

ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಥವಾ ಈಗ ಪಡೆದಿರುವ ಅಂಕಗಳಿಗಿಂತ ಉತ್ತಮ ಅಂಕ ಗಳಿಸಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸದೆ ಮತ್ತೆ ಪರೀಕ್ಷೆ ಬರೆಯುವ ಅವಕಾಶವನ್ನು ನಮ್ಮ ಸರ್ಕಾರ ಕಲ್ಪಿಸಲಿದೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಎಲ್ಲರೂ ಉತ್ತಮ‌ ಅಂಕಗಳ ಜೊತೆ ಶೈಕ್ಷಣಿಕ ಜೀವನದ ಮುಂದಿನ ಗುರಿಯೆಡೆಗೆ ಹೆಜ್ಜೆಯಿರಿಸಿ.

CM Siddaramaiah ರಾಜ್ಯದಲ್ಲಿ ಅತಿ ಕಡಿಮೆ ಫಲಿತಾಂಶದ ಸಾಧನೆ ಮಾಡಿರುವ ತಾಲೂಕುಗಳನ್ನು ಗುರುತಿಸಿ, ಅಲ್ಲಿನ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಆಯೋಜಿಸಿ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುವುದು. ಈ ಬಗ್ಗೆ ಶಿಕ್ಷಣ ಸಚಿವರೂ ಮಾತ್ರವಲ್ಲ ನಾನು ಕೂಡ ಖುದ್ದು ಗಮನ ಹರಿಸುತ್ತೇನೆ ಎಂದು ಪ್ರಸ್ತುತ ಸಾಲಿನ ಎಸ್ಎಸ್ಎಲ್ ಸಿ‌ ಪರೀಕ್ಷೆಯ‌ ಫಲಿತಾಂಶಗಳ‌ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು‌ ತಮ್ಮ ಅನಿಸಿಕೆಯನ್ನು ಜಾಲತಾಣ x ಖಾತೆಯಲ್ಲಿ‌ ಹಂಚಿಕೊಂಡಿದ್ದಾರೆ.

ಸಮಾಜದ ಎಲ್ಲ ಬಗೆಯ ಅಸಮಾನತೆಗಳ ನಿವಾರಣೆಗೆ ಇರುವ ಪರಿಣಾಮಕಾರಿ ಮಾರ್ಗವೆಂದರೆ ಅದು ಶಿಕ್ಷಣ. ಶಿಕ್ಷಣದ ಮೂಲಕ ಬದಲಾವಣೆ ತರಲು ನಾವು ಬದ್ಧರಿದ್ದೇವೆ ಎಂದು ಮುಖ್ಯಮಂತ್ರಿಗಳು‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ "ಆತಿಥ್ಯರತ್ನ"ವನ್ನು...

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ...