Sunday, May 25, 2025
Sunday, May 25, 2025

Sri Lakshmi Narasimha Temple ಹೊಸಮನೆ ಶ್ರೀಲಕ್ಷ್ಮೀನರಸಿಂಹ ದೇಗುಲದಲ್ಲಿ ಶ್ರೀನರಸಿಂಹ ಜಯಂತ್ಯುತ್ಸವ

Date:

Sri Lakshmi Narasimha Temple ಶಿವಮೊಗ್ಗ ಹೊಸಮನೆ ನಾಲ್ಕನೇ ತಿರುವಿನ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಯಂತೋತ್ಸವ ಸಮಾರಂಭ ಮೇ 11ರ ಭಾನುವಾರದಂದು ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9:00ಗಂಟೆಗೆ ಶ್ರೀ ಸುಮುಖಭಟ್ಟ ಅವರ ನೇತೃತ್ವದಲ್ಲಿ ಗುರು ಪ್ರಾರ್ಥನೆ, ಪೂಜೆ ನಡೆಯಲಿದ್ದು ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವರ ಸಾಮೂಹಿಕ ಹೋಮ ನಡೆಯಲಿದೆ. ಮಧ್ಯಾಹ್ನ 12:30ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗವಿರುತ್ತದೆ ಎಂದಿದ್ದಾರೆ.
Sri Lakshmi Narasimha Temple ಸಂಜೆ 6ರಿಂದ ಶಿವಮೊಗ್ಗದ ಸಪ್ತ ಸ್ವರ ಟ್ರಸ್ಟ್ ತಂಡದಿಂದ ಭಕ್ತಿಗೀತೆಗಳ ಕಾರ್ಯಕ್ರಮ ಹಾಗೂ ದಾವಣಗೆರೆ ನಮನ ಅಕಾಡೆಮಿಯ ಕುಮಾರಿ ಹಂಸಿಕ ಅವರಿಂದ ಶ್ರೀ ನರಸಿಂಹ ಸ್ವಾಮಿ ದೇವರ ನವರೂಪದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.
ಈ ದಿನದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಸಂಸದ ಬಿ. ವೈ. ರಾಘವೇಂದ್ರ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಶಾಸಕರಾಧ ಕೆ ಬಿ ಪ್ರಸನ್ನ ಕುಮಾರ್, ಎಸ್ ರುದ್ರೇಗೌಡ, ಎಂ ಎ ಡಿ ಬಿ ಅಧ್ಯಕ್ಷ ಮಂಜುನಾಥಗೌಡ, ಶಾಸಕರಾದ ಚನ್ನಬಸಪ್ಪ, ಡಿಎಸ್ ಅರುಣ್, ಧನಂಜಯ ಸರ್ಜಿ, ಪ್ರಮುಖರಾದ ಆರ್. ಪ್ರಸನ್ನ ಕುಮಾರ್, ಪಿಐ ರವಿ ಪಾಟೀಲ್, ರೇಖಾ ರಂಗನಾಥ್ ಹಾಗೂ ಇತರರು ಆಗಮಿಸಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಲು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ "ಆತಿಥ್ಯರತ್ನ"ವನ್ನು...

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ...