Friday, March 20, 2026
Friday, March 20, 2026

Klive Special Article “ಆಪರೇಷನ್ ಸಿಂಧೂರ್” ಭರ್ಜರಿ ಆರಂಭ

Date:

Klive Special Article ಯುದ್ಧವೆಂದರೆ ‌ನಮಗೆ ತಿಳಿದಂತೆ ಘೋಷಣೆಮಾಡಿ ಆಕ್ರಮಣ ಮಾಡುವುದು. ಇದು ತುರ್ತು ಸ್ಥಿತಿಯಲ್ಲಿ ಮಾತ್ರ. ಆದರೆ ಯೋಜಿತವಾಗಿ ದಾಳಿ ಮಾಡುವ ಶತ್ರುದೇಶದ ಮೋಸದ ದಾಳಿಗೆ ಪ್ರತ್ಯುತ್ತರ ನೀಡುವಾಗ ಘೋಷಣೆಯೇ ಬೇಕಿಲ್ಲ. ಘೋಷಣೆಗಿಂತ ‌ಬುದ್ಧಿವಂತ ಕ್ರಮ ಎಂದರೆ ಶತ್ರುವಿನ ಶಕ್ತಿಕೇಂದ್ರಗಳನ್ನ ಧ್ವಂಸಮಾಡುವುದು.
ಈ ಕ್ರಮದಲ್ಲಿ ನಾಗರಿಕರಿಗೆ ಅಪಾಯ‌ ಕಡಿಮ.

ಈಗ ಪಾಪಿ ಪಾಕಿಗಳಿಗೆ ಶಾಸ್ತಿಮಾಡಲು ನಮ್ಮ ದೇಶ ವಿವೇಕದಿಂದ ಸಂಯಮದಿಂದ ದಾಳಿ ಆರಂಭಿಸಿದೆ.
ಮೊದಲಿಗೆ ಸಿಂಧುನದಿ‌ ಒಪ್ಪಂದ ಅಮಾನತು. ಚಿನಾಬ್ ನದಿಯ ನೀರಿನ‌ ಹರಿವು‌ ಸ್ಥಂಭನ. ಈಗ
ಯುದ್ಧ ಶುರುವಾಗೇ ಬಿಟ್ಟಿತು ಅಂದುಕೊಳ್ಳುತ್ತಿದ್ದಂತೆಯೇ ಒಂಭತ್ತು ಉಗ್ರರ ನೆಲೆಗಳ ಧ್ವಂಸ. ಅದೇ “ಆಪರೇಷನ್ ಸಿಂಧೂರ” ದ ಮಹತ್ತು.
ಮಹಿಳೆಯರ ಸಿಂಧೂರ ಅಳಿಸಲು ಬೆಂಬಲಿಸಿದವರ
ಬುಡಸಮೇತ ಮಟ್ಟಹಾಕುವ ಕಾರ್ಯಕ್ಕೆ ಈ ಹೆಸರು‌‌ ಪ್ರಧಾನಿ ಮೋದಿಯವರೇ ಇಟ್ಟರು ಎಂಬುದು ವಿಶೇಷ.

ಈ ಬೆಳಿಗ್ಗೆ 1.04 ಘಂಟೆಯಿಂ 1-30 ವರೆಗೆ ತೀವ್ರ ವೈಮಾನಿಕ ದಾಳಿಯಿಡಲಾಗಿದೆ.
ಉಗ್ರರ ಅಡಗುದಾಣ, ತರಬೇತಿ ಸ್ಥಳಗಳನ್ನೇ
ಗುರಿಯಾಗಿಸಿದ ಭಾರತದ ಕ್ರಮದ ಜಾಗತಿಕವಾಗಿ ಬೆಂಬಲ ಕೂಡ ಸಿಕ್ಕಿದೆ.
ಚೀನಾ ಮಾತ್ರ ಅಸ್ಪಷ್ಟವಾಗಿ ಹೇಳಿಕೆ ನೀಡಿದೆ.
ಉಗ್ರರ ಮೇಲಿನ ದಾಳಿಯ ನೈಜ ಸೇನಾವರದಿಯನ್ನ ಸೂಕ್ತವಾಗಿ ರಷ್ಯಾ ಮತ್ತು ಅಮೆರಿಕಾಗೆ ರವಾನಿಸಲಾಗಿದೆ.
ಬಿಂಬೆರ್, ಸರ್ಜಾಲ್, ಕೋಟ್ಲಿ.ಮುಜಾಫರ್ ಬಾದ್.ಮುರಿಡಿಕೆ ಸಿಯಾಲ್ ಕೋಟ್ ಮುಂತಾದ ಉಗ್ರರ ನೆಲೆಗಳನ್ನ ಬೂದಿ‌ಮಾಡಲಾಗಿದೆ
ಇದರಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಐದು‌ ತಾಣಗಳಿವೆ. ಪಾಕ್ ಪ್ರದೇಶದ ನಾಲ್ಕು ತಣಗಳು ಸೇರಿವೆ.
ಲೋಕಸಭೆಯ
Klive Special Article ವಿಪಕ್ಷನಾಯಕ ರಾಹುಲ್ ಗಾಂಧಿ ಅವರು ನಮ್ಮ ಭಾರತೀಯ ಸೇನೆ ಬಗ್ಗೆ ಹೆಮ್ಮೆ ಮತ್ತು ಗೌರವ‌ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ
ಸಿದ್ಧರಾಮಯ್ಯ ಅವರು ವಿಶೇಷ ಪತ್ರಿಕಾಗೋಷ್ಠಿಯಲ್ಲಿ
ನಮ್ಮ ಸೇನೆಗೊಂದು‌ ಸಲಾಮ್ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...