Bhadra Project Irrigation ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು.
ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.
Bhadra Project Irrigation 2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರ್. ರವಿಚಂದ್ರ, ಸದಸ್ಯ ಕಾರ್ಯದರ್ಶಿಗಳು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಹಾಗೂ ಅಧೀಕ್ಷಕ ಅಭಿಯಂತರರು, ಕವೀ ನಿ ನಿ ಭದ್ರಾ ಯೋಜನಾ ವೃತ್ತ, ಇವರು ತಿಳಿಸಿದ್ದಾರೆ.