Thursday, August 13, 2026
Thursday, August 13, 2026

Department of Kannada and Culture ಮೇ 12. ಶಿವಮೊಗ್ಗದಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ

Date:

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮೇ 12 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಭಗವಾನ್ ಶ್ರೀ ಬುದ್ಧರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Department of Kannada and Culture ಶಿಕಾರಿಪುರ ತಾಲೂಕು ಹೊಸೂರು ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಘು ಆರ್. ಮಲ್ಲಣ್ಣರ್‌ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...