Thursday, September 17, 2026
Thursday, September 17, 2026

Bhadra Reservoir ಭದ್ರಾ ಎಡದಂಡೆ ನಾಲೆಯಲ್ಲಿ ಮೇ10 ರಿಂದ ಮೇ18 ವರೆಗೆ ನೀರು‌ ಬಿಡುಗಡೆ, ಕಾಲುವೆ ಸುತ್ತಮುತ್ತ ಗ್ರಾಮಸ್ಥರು ಎಚ್ಚರವಹಿಸಲು‌ ಪ್ರಕಟಣೆ

Date:

Bhadra Reservoir ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಮತ್ತು ಸಂಬಂಧಪಟ್ಟವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯ ಮೇರೆಗೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆ ರವರು ಅದೇಶದಂತೆ, ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ದಿ:10.05.2025ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ದಿ:18.05.2025ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Bhadra Reservoir ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ. 2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್‌ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...