Monday, August 3, 2026
Monday, August 3, 2026

JSS Polytechnic for the Differently Abled ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಗೆ 2025-26 ನೇ ಸಾಲಿಗೆ ಪ್ರವೇಶಾತಿ ಪ್ರಕಟಣೆ

Date:

JSS Polytechnic for the Differently Abled ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2025-26 ನೇ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಅಖಿಲ ಭಾರತ ಮಟ್ಟದಲ್ಲಿ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅನುದಾನಿತ ಕೋರ್ಸ್ಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಹಾಗೂ ಅನುದಾನ ರಹಿತ ಕೋರ್ಸ್ಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್(ಫಾರ್ ವಿಜ್ಯುವಲಿ ಇಂರ‍್ಡ್), ಅಪಾರೇಲ್ ಡಿಸೈನ್ ಅಂಡ್ ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಂಡ್ ಎಲೆಕ್ಟ್ರಿಕ್ ವಿಹಿಕಲ್ ಟೆಕ್ನಾಲಜಿ ಕೋರ್ಸ್ಗಳು ಲಭ್ಯವಿದೆ.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರ ಮೂಲಕ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ ಶೇ.60 ಡಿಬಿ ಮತ್ತು ಮೇಲ್ಪಟ್ಟು ಹಾಗೂ ಅಂಧತ್ವ 6/60 ಅಥವಾ 20/200 ಸ್ನೆಲೆನ್ ಕಂಪ್ಯೂಟರ್ ಅಪ್ಲಿಕೇಶನ್ಸ್ (ಫಾರ್ ವಿಜ್ಯುವಲಿ ಇಂಪರ‍್ಡ್) ರ ಕೋರ್ಸಿಗೆ ಮೇಲಿನ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಪ್ರವೇಶ ಅರ್ಜಿಯು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಹಾಗೂ ಎಸ್‌ಸಿ/ಎಸ್‌ಟಿ/ಸಿ-1 ವರ್ಗದವರಿಗೆ ರೂ.50 ಒಳಗೊಂಡಿದೆ.

JSS Polytechnic for the Differently Abled ಅರ್ಜಿಯನ್ನು ಜೆಎಸ್‌ಎಸ್ ಮಹಾವಿದ್ಯಾಪೀಠ ಜೆಎಸ್‌ಎಸ್ ವಿಶೇಷಚೇತನ ಪಾಲಿಟೆಕ್ನಿಕ್ ವಿಳಾಸದಿಂದ ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 16 ರೊಳಗೆ ಕಛೇರಿಗೆ ತಲುಪುವಂತೆ ಜಿಎಸ್‌ಎಸ್ ವಿಶೇಷಚೇತನ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ www.jsspda.org/ ಇ-ಮೇಲ್ jsspda@gmail.com / ಮೊ. ಸಂ:9844644937 ಮೂಲಕ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...