Thursday, June 18, 2026
Thursday, June 18, 2026

Rotary Club Shimoga ಭಾರತೀಯ ಸಂಸ್ಕೃತಿ‌ ಉಳಿಸುವುದು ನಮ್ಮೆಲ್ಲರ ಕರ್ತವ್ಯ- ವಿದ್ವಾನ್ ಶಿವಾನಂದ ಭಟ್

Date:

Rotary Club Shimoga ಭಾರತೀಯ ಸಂಸ್ಕೃತಿಯಲ್ಲಿ ಪುರಾತನವಾದದ್ದು ದೇವಭಾಷೆ. ಅದನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ವಿದ್ವಾನ್ ಶಿವಾನಂದ್ ಭಟ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಜ್ಯುಬಿಲಿ ವಾರದ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರಸ್ವತಿ ಶ್ಲೋಕಗಳನ್ನು ಕಲಿಸಲು ಜೂನ್ ನಿಂದ ಶಿಬಿರ ಪ್ರಾರಂಭಿಸಲು ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

ನಮಗೆ ಜನ್ಮ ಇತ್ತ, ನಮ್ಮ ತಂದೆ-ತಾಯಿಗೆ ಮೊದಲು ನಮಸ್ಕರಿಸಬೇಕು. ಪೂರ್ವಜನ್ಮದ ಆತ್ಮಗಳಿಂದ ನಮ್ಮ ನಡೆನುಡಿಗಳು ಬಿಂಬಿತವಾಗುತ್ತದೆ. ಶಿಕ್ಷಕರ ಮಕ್ಕಳು ಶಿಕ್ಷಕರೇ ಆಗುವುದಿಲ್ಲ. ದೇಹ ಮಣ್ಣಿನಲ್ಲಿ ಲೀನವಾಗುತ್ತೆ ಆದರೆ, ಆತ್ಮನಶಿಸುವುದಿಲ್ಲ ಎಂಬ ನಂಬಿಕೆ ಇದೆ. ಮಕ್ಕಳಿಗೆ ಅಂಕಗಳಿಸುವ ಶಿಕ್ಷಣದಿಂದ ಯಾವುದೇ ಅನುಕೂಲಗಳಿಲ್ಲ. ಸಂಸ್ಕೃತದಿಂದ ಎಲ್ಲಾ ಭಾಷೆ ಸುಲಭವಾಗಿ ಕಲಿಯಬಹುದು. ದೇಶದ್ರೋಹಿಗಳು ಸಂಸ್ಕೃತ ಸತ್ತಭಾಷೆ ಎನ್ನುತ್ತಾರೆ. ಸಂಸ್ಕಾರದಿಂದ ಬದಲಾವಣೆ ಸಾದ್ಯ. ಇಂದಿಗೂ ನಾಸದವರು ನಮ್ಮ ನಂಬಿಕೆಗಳನ್ನು ಗೌರವಿಸುತ್ತಾರೆ ಹಾಗೂ ಪಾಲಿಸುತ್ತಾರೆ. ಶಸ್ತ್ರಚಿಕಿತ್ಸೆಯಲ್ಲಿ ಜೀವ ಇರುವುದು ಕಾಣುವುದಿಲ್ಲ, ವಿಜ್ಞಾನಕ್ಕೂ ಸವಾಲಾಗಿದೆ ಎಂದು ಹೇಳಿದರು.

Rotary Club Shimoga ಅಧ್ಯಕ್ಷತೆ ವಹಿಸಿದ್ದ ರೊ.ರೂಪಪುಣ್ಯಕೊಟಿ ಮಾತನಾಡಿ, ನಮ್ಮ ದೇಶದ ಆಚಾರ ವಿಚಾರಗಳನ್ನು ಇಂತಹ ವಿದ್ವಾಂಸರಿಂದ ಮಾತ್ರ ಉಳಿಸಿ ಬೆಳೆಸಲು ಸಾದ್ಯ. ನಮ್ಮ ಸಂಸ್ಕೃತಿಯನ್ನು ನಾವು ಗೌರವಿಸುವುದನ್ನು ಮೊದಲು ಕಲಿಯಬೇಕು ಹಾಗೂ ಉಳಿಸಬೇಕಾಗಿದೆ ಎಂದರು.ಕಾರ್ಯಕ್ರಮದಲ್ಲಿ ರೊ.ಸತ್ಯನಾರಾಯಣ್ ಸ್ವಾಗತಿಸಿ, ರೊ.ರೇಣುಕಾರಾದ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ರೊ.ಪ್ರಕೃತಿ ಮಂಚಾಲೆ ವಂದಿಸಿದರು. ಭಾರದ್ವಾಜ್, ಜಿ.ವಿಜಯಕುಮಾರ್, ವಾಗೇಶ್, ನಾಗರಾಜ್ ರಾಜಶೇಖರ್ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...