Kateel Ashok Pai Memorial College ಮಾನಸ ಟ್ರಸ್ಟ್ ನ ಕಟೀಲ ಅಶೋಕ್ ಪೈ ಸ್ಮಾರಕ ಸಮೂಹ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಸಮಾರೋಪ ಸಮಾರಂಭದಲ್ಲಿ ಪ್ರಿಯದರ್ಶಿನಿ ಶಿಕ್ಷಣ ಸಂಸ್ಥೆ ಹಾಗೂ ಆರ್ಯ ಪದವಿ ಪೂರ್ವ ಕಾಲೇಜಿನ ನಿರ್ದೇಶಕರಾದ ಶ್ರೀ ರಮೇಶ್ ಎನ್ ರವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು .
2025ರ ಮೇ ಹತ್ತರಂದು ನಗರದ ಅಂಬೇಡ್ಕರ್ ಭವನದಲ್ಲಿ ಮಾನಸ ಟ್ರಸ್ಟ್ ನ ವಿವಿಧ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಎನ್ ರಮೇಶ್ ರವರು ಮಾನಸ ಶಿಕ್ಷಣ ಸಂಸ್ಥೆಗಳು ಬಹಳ ಪ್ರಮುಖ ಕೆಲಸ ಕಾರ್ಯಗಳನ್ನು ನಡೆಸುತ್ತಿವೆ .ವಿದ್ಯಾರ್ಥಿಗಳನ್ನು ಸಮಾಜಮುಖಿಯಾಗಿ ರೂಪಿಸುತ್ತಿರುವ ಈ ಸಂಸ್ಥೆಯ ಕಾರ್ಯ ಶ್ಲಾಘನೀಯ ವಾದುದು .ಇದನ್ನು ಅರಿತುಕೊಂಡು ಇಲ್ಲಿ ಓದುವ ವಿದ್ಯಾರ್ಥಿಗಳು ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲಿ ,ಸಮಾಜಮುಖಿಯಾಗಿ ಕೆಲಸ ಮಾಡುವ ರೀತಿಯಲ್ಲಿ ತಮ್ಮನ್ನು ತಾವು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು .ಈ ಒಂಬತ್ತನೇ ವಾರ್ಷಿಕೋತ್ಸವದಲ್ಲಿ ಶಿವಮೊಗ್ಗ ನಗರಕ್ಕೆ ಕೀರ್ತಿ ತಂದಿರುವ ಹತ್ತನೇ ತರಗತಿಯಲ್ಲಿ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಆದಿಚುಂಚನಗಿರಿ ಪ್ರೌಢಶಾಲೆಯ ಶ್ರೀ ಸಹಿಷ್ಣು ಹಾಗೂ ಪ್ರಾಂಶುಪಾಲರಾದ ಶ್ರೀಮತಿ ದಿವ್ಯ, ರಾಮಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕುಮಾರಿ ನಿತ್ಯ ಹಾಗೂ ಪ್ರಾಂಶುಪಾಲರಾದ ಶ್ರೀ ರೀತೇಶ್, ಮತ್ತು ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾದ ಕುಮಾರಿ ನಮನ ಹಾಗೂ ಪ್ರಾಂಶುಪಾಲರಾದ ಶ್ರೀಮತಿ ಸುನಿತಾ ದೇವಿ ಇವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಪೂರಕ ಆರೋಗ್ಯ ಸಂಸ್ಥೆಯ ವಿದ್ಯಾರ್ಥಿನಿಯರಾದ ಕುಮಾರಿ ಮಯೂರಿ ಮೇಟಿ ,ಕುಮಾರಿ ಸಂಧಿಯ , ಕುಮಾರಿ ನಸುರೀನ್. ಕುಮಾರಿ ಹರ್ಷಿತ ಹಾಗೂ ಕುಮಾರಿ ರಾಜಲಕ್ಷ್ಮಿ ಎಂಬ ಐವರು ವಿದ್ಯಾರ್ಥಿಗಳನ್ನು ರಾಜ್ಯಮಟ್ಟದ ರಾಂಕ್ ಪಡೆದಿರುವುದಕ್ಕೆ ಸನ್ಮಾನಿಸಲಾಯಿತು.
ಕಾಲೇಜಿಗೆ ರಾಜ್ಯಮಟ್ಟದಲ್ಲಿ ಎಂಎಸ್ಸಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಪ್ರಥಮ ರಾಂಕ್ ಬಂದಿರುವುದಲ್ಲದೆ ಒಟ್ಟು ಐದು ರ್ಯಾಂಕ್ಗಳು ಬಂದಿದೆ ಎಂಬುದನ್ನು ಪ್ರಾಂಶುಪಾಲರು ತಿಳಿಸಿದರು. ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಇದಲ್ಲದೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆಯನ್ನು ಮಾಡಿರುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಕ್ರೀಡಾ ಚಟುವಟಿಕೆಗಳ ವಿಜೇತರಿಗೆ ಬಹುಮಾನ ಪ್ರಶಸ್ತಿಗಳನ್ನು ನೀಡಲಾಯಿತು .ಈ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಶುಭ ಮರವಂತೆ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪುಸ್ತಕ ಪ್ರೀತಿ ಮತ್ತು ಜನಸೇವೆಯ ಅಭಿಮಾನ. ಇವೆರಡನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂಬ ಕಿವಿ ಮಾತನ್ನು ತಿಳಿಸಿದರು.
Kateel Ashok Pai Memorial College ಈ ಕಾರ್ಯಕ್ರಮದಲ್ಲಿ ಮಾನಸ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರು ನಿರ್ದೇಶಕರು ಆಗಿರುವ ಡಾ. ರಾಜೇಂದ್ರ ಚೆನ್ನಿ ಉಪಸ್ಥಿತರಿದ್ದರು .ಅಲ್ಲದೆ ಕಟೀಲ್ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲರಾದ ಡಾಕ್ಟರ್ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು .
ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಸಂಧ್ಯಾ ಹಾಗೂ ಶ್ರೀ ಅಜಯ್ ನಿರ್ವಹಿಸಿದರು .ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನು ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ನಡೆಸಿದರು .ಅವರು ಕಾಲೇಜು 2017ರಲ್ಲಿ ಪ್ರಾರಂಭವಾಗಿ ಶೈಕ್ಷಣಿಕವಾಗಿ ಹಾಗೂ ಪಠ್ಯೇತರವಾಗಿ ಗುರುತಿಸಿಕೊಂಡು ಬರುತ್ತಿದೆ ಎಂದು ತಿಳಿಸಿದರು .ಉತ್ತಮ ಗುಣಮಟ್ಟದ ಶಿಕ್ಷಣಗಳನ್ನು ನೀಡುತ್ತಿರುವ ಈ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಬಿಎ ,ಬಿಎಸ್ಸಿ, ಬಿ ಎಸ್ ಡಬ್ಲ್ಯೂ, ಬಿಕಾಂ, ಎಂ ಎಸ್ ಸಿ ಸೈಕಾಲಜಿ ,ಕ್ಲೀನಿಕಲ್ ಸೈಕಾಲಜಿ ,ಬಿ ಎಸ್ ಸಿ ನರ್ಸಿಂಗ್ ಇತ್ಯಾದಿ ಕೋರ್ಸ್ಗಳು ಲಭ್ಯವಿದೆ .ಇದಲ್ಲದೆ ಈ ವರ್ಷ 2024_ 25 ನೇ ಸಾಲಿನಲ್ಲಿ ಕುವೆಂಪು ವಿಶ್ವವಿದ್ಯಾಲಯ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿಗೆ ಮನ: ಶಾಸ್ತ್ರದಲ್ಲಿ ಸಂಶೋಧನಾ ಕೇಂದ್ರವೆಂಬ ಮಾನ್ಯತೆಯನ್ನು ನೀಡಿರುವುದಾಗಿ ಅವರು ತಿಳಿಸಿದರು.
ಕಾಲೇಜು ನಡೆದು ಬಂದ ದಾರಿಯಲ್ಲಿ ಈ ಒಂಬತ್ತನೇ ವರ್ಷದ ವಾರ್ಷಿಕೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದ್ದೇವೆ.ಎಂದು ಅವರು ತಿಳಿಸಿದರು .ವೇದಿಕೆಯ ಕಾರ್ಯಕ್ರಮದ ನಂತರ ವಿವಿಧ ಮನೋರಂಜನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳು ಚೆಂಡೆ ವಾದನ,ಜನಪದ ನೃತ್ಯ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ನೀಡಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ವಂದನಾರ್ಪಣೆಯನ್ನು ಐಕ್ಯುಎಸಿ ಸಂಯೋಜಕರಾದ ಡಾಕ್ಟರ್ ಅರ್ಚನಾ ಭಟ್ ನೆರವೇರಿಸಿದರು. ಪ್ರಶಸ್ತಿ ಪ್ರದಾನ ಮತ್ತು ಬಹುಮಾನ ವಿತರಣೆ ಯನ್ನು ಉಪನ್ಯಾಸಕರಾದ ಶ್ರೀಮತಿ ರೇಷ್ಮಾ, ಶ್ರೀ ಮಂಜುನಾಥ ಸ್ವಾಮಿ ಹಾಗೂ ಶ್ರೀ ರಾಯಪ್ಪ ನಿರ್ವಹಿಸಿದರು. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕುಮಾರಿ ಹನಿ ಕುರುವರಿಯವರು ನಿರ್ವಹಿಸಿದರು. ವಿದ್ಯಾರ್ಥಿಗಳು ಸ್ವಾಗತ ನೃತ್ಯ ,ಪ್ರಾರ್ಥನೆ ಇತ್ಯಾದಿಗಳನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾನಸ ಸಂಸ್ಥೆಯ ನಿರ್ದೇಶಕರಾದ ಡಾ. ರಜನಿ ಎ ಪೈರವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಮಾನಸ ಸಂಸ್ಥೆ ಕೇವಲ ಮನೋವೈದ್ಯಕೀಯ ಸಂಸ್ಥೆ ಮಾತ್ರವಲ್ಲದೆ ಸಮಾಜದ ವಿವಿಧ ಸಂಸ್ಥೆಗಳ ವಿಶ್ವವಿದ್ಯಾಲಯಗಳ ಸಹಯೋಗ ಹಾಗೂ ಸಂಯೋಜನೆಯೊಂದಿಗೆ ಶೈಕ್ಷಣಿಕವಾಗಿಯು ಮುನ್ನಡೆಯುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದು ತಿಳಿಸಿದರು.
ಅವರು ಶೈಕ್ಷಣಿಕವಾಗಿ ಪಠ್ಯೇತರವಾಗಿ ಇಂದು ಮಾನಸ ಸಂಸ್ಥೆಯ ಹೆಸರನ್ನು ಪ್ರಸಿದ್ಧಿಗೆ ತಂದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿ ಈ ಸಂಸ್ಥೆಗಳಿಗೆ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡುತ್ತಿರುವ ಎಲ್ಲಾ ಪೋಷಕರನ್ನು ಕೃತಜ್ಞತೆಯಿಂದ ಸ್ಮರಿಸಿದರು.
ಅವರು ಡಾ ಅಶೋಕ ಪೈರವರ ದೃಷ್ಟಿಕೋನ ದಂತೆ ಎಲ್ಲ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿರುವುದು ಸಂತೋಷ ತಂದಿದೆ ಹಾಗೂ ಸಾರ್ಥಕ ಭಾವವನ್ನು ಮೂಡಿಸುತ್ತಿದೆ ಎಂದು ತಿಳಿಸಿದರು .ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ಭವಿಷ್ಯದಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.