Wednesday, March 25, 2026
Wednesday, March 25, 2026

Karnataka Public School ಮಕ್ಕಳನ್ನ ಓದು ಮತ್ತು‌ ಆರೋಗ್ಯದ ಕಾಳಜಿ ಇರುವ ಸರ್ಕಾರಿ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನ‌ ಸೇರಿಸಿ- ಡಿಡಿಪಿಐ ಮಂಜುನಾಥ್

Date:

Karnataka Public School ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ಸಮವಸ್ತ್ರ ಪಠ್ಯಪುಸ್ತಕ ಹಾಗೂ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಆಡಳಿತ ಉಪ ನಿರ್ದೇಶಕರಾದ ಮಂಜುನಾಥ್ ಹೇಳಿದರು.
ಶಿವಮೊಗ್ಗ ನಗರದ ಬಿಹೆಚ್ ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಯೋಜಿಸಿದ್ದ ತಾಲ್ಲೂಕು ಮಟ್ಟದ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಶಿಕ್ಷಣವನ್ನು ಮಾತ್ರವಲ್ಲದೆ ವಿದ್ಯಾರ್ಥಿಗಳ ಓದಿಗೆ ಪೂರಕವಾದ ಯೂನಿಫಾರ್ಮ್, ಶೂ, ಸಾಕ್ಸ್ ಒಳಗೊಂಡAತೆ ಅಗತ್ಯ ಸೌಲಭ್ಯಗಳನ್ನು ಉಚಿತವಾಗಿ ಪೂರೈಸುತ್ತಿದೆ. ಪಿ.ಎಂ ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಬಿಸಿ ಊಟ, ಕೆನೆಭರಿತ ಹಾಲು, ರಾಗಿ ಮಾಲ್ಟ್, ಪೌಷ್ಟಿಕತೆಗೆ ಪೂರಕವಾದ ಮೊಟ್ಟೆ ಹಾಗೂ ಬಾಳೆಹಣ್ಣನ್ನು ನೀಡಲಾಗುತ್ತಿದೆ.
ಇದಲ್ಲದೆ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಎಲ್ಲಾ ಮಕ್ಕಳಿಗೆ ಆರೋಗ್ಯದ ಹಿತದೃಷ್ಟಿಯಿಂದ ದೇಹದಲ್ಲಿ ಉಂಟಾಗುವAತಹ ರಕ್ತಹೀನತೆಯನ್ನು ಹೋಗಲಾಡಿಸಲು ಕಬ್ಬಿಣ ಮಾತ್ರೆಗಳನ್ನು ನೀಡಲಾಗುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದೆ ಸರ್ಕಾರಿ ಶಾಲೆಗಳಿಗೆ ಸೇರಿಸಿ ಈ ಮೂಲಕ ಸರ್ಕಾರಿ ಶಾಲೆಗಳ ಉನ್ನತಿಗಾಗಿ ಶ್ರಮಿಸಲು ಸಹಕಾರ ನೀಡಿ ಎಂದು ಕೋರಿದರು.
Karnataka Public School ಕ್ಷೇತ್ರ ಸಮನ್ವಯ ಅಧಿಕಾರಿ ಶಿವಪ್ಪ ಸಂಗಣ್ಣನವರ್ ಮಾತನಾಡಿ, ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಸರ್ಕಾರ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿಯಿಂದಲೆ ಇಂಗ್ಲಿಷ್ ಮಾಧ್ಯಮವನ್ನು ತೆರೆಯಲಾಗುತ್ತಿದೆ. ಹಾಗಾಗಿ ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದರ ಮೂಲಕ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಹೆಚ್.ಮೋಹನೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗಾಗಿ ಮಧ್ಯಾಹ್ನದ ಬಿಸಿಯೂಟ, ಪೌಷ್ಟಿಕಾಂಶವುಳ್ಳ ಮೊಟ್ಟೆ, ಬಾಳೆಹಣ್ಣು, ಕೆನೆಭರಿತ ಹಾಲು ಹಾಗೂ ರಾಗಿ ಮಾಲ್ಟ್ನ್ನು ಸರ್ಕಾರ ಒದಗಿಸುತ್ತಿದೆ. ಮಕ್ಕಳು ಅದರ ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕೆಂದು ಸಲಹೆ ನೀಡಿದರು.
ಅಕ್ಷರ ದಾಸೋಹ ಕಚೇರಿಯ ಪ್ರಥಮ ದರ್ಜೆ ಸಹಾಯಕ ರಾಜೇಶ್ ಯೋಜನೆಯ ಪೂರಕವಾದ ಪೌಷ್ಟಿಕ ಆಹಾರದ ಕುರಿತು ಪಿಪಿಟಿ ಪ್ರೆಸೆಂಟೇಷನ್ ನೀಡಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿಯ ಜಿಲ್ಲಾ ಉಪಾಧ್ಯಕ್ಷ ಸತೀಶ್, ಬೆಂಗಳೂರು ವಿಭಾಗದ ಎಪಿಎಫ್ ಕೋ-ಆರ್ಡಿನೇಟರ್ ಪ್ರಭಾನಂದ ಹೆಗಡೆ, ಕೆಪಿಎಸ್ ಶಾಲೆಯ ಉಪ ಪ್ರಾಚಾರ್ಯ ದಾದಾಪೀರ್, ಶಿಕ್ಷಣ ಸಂಯೋಜಕರುಗಳಾದ ಶಶಿರೇಖಾ, ಹರೀಶ್, ಮೋಹನ್ ಹಾಗೂ ಬಿಆರ್‌ಪಿ ಧನಂಜಯ್, ಎಲ್ಲಾ ಕ್ಲಸ್ಟರ್ ಸಿಆರ್‌ಪಿಗಳು, ನಗರ ಭಾಗದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು, ಪದಾಧಿಕಾರಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಅಡುಗೆ ಸಹಾಯಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...