Monday, February 2, 2026
Monday, February 2, 2026

Ayanur Manjunath ಶಿವಮೊಗ್ಗ ಆತಿಥ್ಯಕ್ಕೆ ಹೆಸರಾಗಿದೆ.ಕ್ರೀಡಾಕೂಟದಲ್ಲಿ ಪಾಲ್ಗೊಂಡವರೆಲ್ಲರೂ ಸದಾ ನೆನಪಲ್ಲಿರುವಂತೆ ಆಗಿದೆ- ಆಯನೂರು‌‌ ಮಂಜುನಾಥ್

Date:

Ayanur Manjunath ಮಲೆನಾಡು ರಾಜ್ಯದಲ್ಲಿಯೇ ಆತಿಥ್ಯಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಕ್ರೀಡಾಕೂಟಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿರುವ ನೌಕರ ಕ್ರೀಡಾಪಟುಗಳು ಶಿವಮೊಗ್ಗದಲ್ಲಿ ಕಳೆದ ಅಲ್ಪ ಸಮಯ, ಇಲ್ಲಿನ ಆತಿಥ್ಯವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಜಿ ಸಂಸದ ಆಯನೂರು ಮಂಜುನಾಥ್‌ಅವರು ಹೇಳಿದರು.
ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಹಲವು ವೈಶಿಷ್ಟ್ಯಗಳ ತವರಾಗಿರುವ ಶಿವಮೊಗ್ಗ ಜಿಲ್ಲೆಗೆ ದೇಶದಲ್ಲಿಯೇ ವಿಶಿಷ್ಟಸ್ಥಾನವಿದೆ. ಇಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ಸ್ಪರ್ಧಿಗಳು ರಾಷ್ಟ್ರಮಟ್ಟದಲ್ಲಿಯೂ ಸ್ಥಾನ ಪಡೆದು, ರಾಜ್ಯಕ್ಕೆ ಕೀರ್ತಿ ತರುವಂತೆ ಆಶಿಸಿದ ಅವರು, ರಾಜ್ಯದ ಯಾವುದೇ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ-ಸಿಬ್ಬಂಧಿಗಳನ್ನು ಗೌರವಿಸುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್‌ಅವರು ಮಾತನಾಡಿ, ನೌಕರರು ತಮ್ಮ ಜವಾಬ್ದಾರಿಯರಿತು ಪ್ರಾಮಾಣಿಕವಾಗಿ ನಿರ್ವಹಿಸುವ ಕಾರ್ಯದಿಂದ ಸರ್ಕಾರದ ಗೌರವ ಹೆಚ್ಚಲಿದೆ. ಸರ್ಕಾರದ ಬೆನ್ನೆಲುಬಾಗಿರುವ ನೌಕರರಿಂದಾಗಿಯೇ ಸರ್ಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ವದ ಕಾರ್ಯವೂ ನಡೆಯಲಿದೆ ಎಂದರು.
Ayanur Manjunath ನೌಕರರು ತಮ್ಮ ದೈನಂದಿನ ಕೆಲಸಗಳ ಒತ್ತಡದ ಮದ್ಯೆ ಒಂದಷ್ಟು ಸಮಯ ಸಂತೋಷದಿಂದ ಲವಲವಿಕೆಯಿಂದಿರಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯವಾಗಿವೆ. ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಹಿಂದೆ ಪ್ರತಿ ಮೂರು ನಾಲ್ಕು ವರ್ಷಗಳಿಗೊಮ್ಮೆ ನಡೆಸಲಾಗುತ್ತಿದ್ದ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಕಳೆದ ಕೆಲವು ವರ್ಷಗಳಿಂದ ಪ್ರತಿವರ್ಷ ನಿರಂತರವಾಗಿ ವ್ಯವಸ್ಥಿತವಾಗಿ ನಡೆಸಿಕೊಂಡು ಬರಲಾಗುತ್ತಿದೆ. ರಾಜ್ಯಮಟ್ಟದ ಕ್ರೀಡೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಳುಗಳಿಗೆ ಏಕರೀತಿಯ ಟ್ರಾಕ್‌ಶೂಟನ್ನು ಒದಗಿಸಲಾಗುವುದು ಎಂದರು.
ಪ್ರತಿವರ್ಷಕ್ಕಿಂತ ಈ ಭಾರೀಯ ಅದರಲ್ಲೂ ಶಿವಮೊಗ್ಗದಲ್ಲಿ ಆಯೋಜಿಸಲಾಗಿರುವ ಕ್ರೀಡಾಕೂಟ ವಿಶಿಷ್ಟವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ರಚನಾತ್ಮಕವಾಗಿ ಕ್ರೀಡಾಕೂಟವನ್ನು ಆಯೋಜಿಸಲು ವಿಶೇಷ ಗಮನಹರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕೆ.ಇ.ಕಾಂತೇಶ್‌, ಯೋಗೀಶ್‌, ಜಗದೀಶ್‌, ಗೋಪಿನಾಥ್‌, ಗುರುಮೂರ್ತಿ, ಆರ್.ಮೋಹನ್‌ಕುಮಾರ್‌, ರೇಖ್ಯಾನಾಯ್ಕ್‌ಸೇರಿದಂತೆ ಸರ್ಕಾರಿ ನೌಕರರ ಸಂಘದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಕೇಂದ್ರ ಸಂಘದ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿಪತ್ರ, ಸ್ಮರಣಿಕೆ ಹಾಗೂ ಟ್ರಾಲಿಬ್ಯಾಗ್‌ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...