Thursday, June 18, 2026
Thursday, June 18, 2026

Department of Agriculture ರೈತರೆ, ನಿಮ್ಮಲ್ಲಿ‌‌ ದೇಸಿತಳಿಗಳಿವೆಯೆ? ಹಾಗಿದ್ದಲ್ಲಿ‌ ಕೃಷಿ‌ ಇಲಾಖೆಯಲ್ಲಿ ತಳಿಗಳ‌ ನೋಂದಣಿ‌ ಮಾಡಿಸಿ.-ಕೃಷಿ ಇಲಾಖೆ ಪ್ರಕಟಣೆ

Date:

Department of Agriculture ಜಿಲ್ಲಾ ಕೃಷಿ ಇಲಾಖೆಯಿಂದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ಹಾಗೂ ನಶಿಸಿಹೋಗುತ್ತಿರುವ ಸ್ಥಳೀಯ ಬೆಳೆಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಂದು ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲಾಗುತ್ತಿದ್ದು, ರೈತರು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದೆ.
ಆಯಾ ಪ್ರದೇಶದಲ್ಲಿ ಸ್ಥಳೀಯ ಅಥವಾ ಸಾಂಪ್ರದಾಯಕವಾಗಿ ಕೃಷಿ ಪದ್ದತಿಯಿಂದ ಅಭಿವೃದ್ದಿ ಮತ್ತು ನಿರ್ವಹಿಸುವ ತಳಿಗಳನ್ನು ದೇಶಿ ತಳಿಗಳೆಂದು ಕರೆಯಲಾಗಿದ್ದು, ಈ ಕಾರ್ಯಕ್ರಮದಡಿ ಆಯ್ಕೆಯಾದ ಭತ್ತ, ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು, ಹುಚ್ಚೆಳ್ಳು, ಕುಸುಬೆ, ಎಳ್ಳು, ನವಣೆ, ಊದಲು, ಕೊರಲೆ, ಹಾರಕ, ಬರಗು ಮತ್ತು ಇತರೆ ಬೆಳೆಗಳಲ್ಲಿ ದೇಸಿ ತಳಿಗಳಿದ್ದರೆ ಅದನ್ನು ಸಲಹಾ ಸಮಿತಿಗೆ ಶಿಫಾರಸು ಮಾಡಲು ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳುವುದು.
Department of Agriculture ಇತ್ತೀಚಿಗೆ ಕಣ್ಮರೆಯಾಗುತ್ತಿರುವ ದೇಸಿ ತಳಿಗಳನ್ನು ಮೂಲ ಸಮೀಕ್ಷೆ ಮೂಲಕ ಗುರುತಿಸಿ ಸಂರಕ್ಷಣೆಯನ್ನು ಮಾಡುವ ಗುರಿಯನ್ನು ಹೊಂದಲಾಗಿದ್ದು, ಯೋಜನೆಯನ್ನು ದೇಸಿ ತಳಿಗಳ ಸಂರಕ್ಷಣೆ ಮತ್ತು ಕೃಷಿಯಲ್ಲಿ ತೊಡಗಿರುವ ರೈತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಇರಬೇಕು. ಹಾಗೂ ಬೀಜ ಬ್ಯಾಂಕ್‌ನಲ್ಲಿರಿಸಲು ರೈತರು ಕಡ್ಡಾಯವಾಗಿ ಅಗತ್ಯ ಪ್ರಮಾಣದ ದೇಸಿ ತಳಿಗಳ ಬೀಜಗಳನ್ನು ನೀಡಲು ಸಿದ್ದರಿರಬೇಕು. ಜಾನುವಾರು ನಿರ್ವಹಣೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ, ಪುನರುತ್ಪಾದಕ ಕೃಷಿ ಮತ್ತು ಇತರೆ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರಬೇಕು.
ಈ ಯೋಜನೆಯಡಿ ತಳಿಗಳನ್ನು ನೋಂದಾಯಿಸಿಕೊಳ್ಳಲು ಇಚ್ಚಿಸುವರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...