Dinesh Gundu Rao ರಾಜ್ಯದಲ್ಲಿರುವ 1400 ಜನೌಷಧಿ ಕೇಂದ್ರಗಳಲ್ಲಿ ನಮ್ಮ ಸರ್ಕಾರೀ ಆಸ್ಪತ್ರೆ ಆವರಣದಲ್ಲಿರುವ 180 ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮಾತ್ರ ಆದೇಶಿಸಲಾಗಿದೆ.
ಈ ಬಗ್ಗೆ ಅನಗತ್ಯ ಸುಳ್ಳುಗಳ ಮೂಲಕ ಜನರ ದಿಕ್ಕು ತಪ್ಪಿಸಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರ ಟೀಕೆಗೆ ಉತ್ತರಿಸಿದ್ದಾರೆ
Dinesh Gundu Rao ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಸಾರ್ವಜನಿಕರಿಗೆ ಔಷಧಿಗಳು ಉಚಿತವಾಗಿ ಲಭ್ಯವಾಗಬೇಕು. ನಮ್ಮ ಸರ್ಕಾರೀ ಆಸ್ಪತ್ರೆಗಳಲ್ಲೇ ಜನರಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುತ್ತಿದೆ. ಹೀಗಿರುವಾಗ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ.
ಒಂದು ವೇಳೆ ಸರ್ಕಾರೀ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿಲ್ಲದೆ ಹೋದರೆ ಸರ್ಕಾರೀ ಆಸ್ಪತ್ರೆಗಳು ಭಾರತೀಯ ಔಷಧ ಬ್ಯೂರೋ (ಬಿಪಿಪಿಐ) ಮೂಲಕ ನೇರವಾಗಿ ಜೆನೆರಿಕ್ ಔಷಧಿಗಳನ್ನು ಖರೀದಿಸಲು ಸೂಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.