Thursday, August 13, 2026
Thursday, August 13, 2026

Kavita Thorat ಆಸಂಘಟಿತ ಕೂಲಿ‌ ಕಾರ್ಮಿಕ ಮಹಿಳೆಯರು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು- ಕವಿತಾ ಥೋರತ್

Date:

Kavita Thorat ಮಹಿಳೆಯರು ಸಾಮಾಜಿಕ, ಆರ್ಥಿಕ ಹಾಗೂ ಕೌಟುಂಬಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸಲು ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಹೊಣೆಗಾರಿಕೆ ಮಹಿಳೆಯರ ಮೇಲಿದೆ ಎಂದು ಅಸಂಘಟಿತ ಕೂಲಿ ಕಾರ್ಮಿಕರ ಮಹಿಳಾ ಜಿಲ್ಲಾಧ್ಯಕ್ಷೆ ಕವಿತಾ ಥೋರತ್ ಹೇಳಿದರು.
ಅವರು ನಗರದ ಆಲ್ಕೋಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಎಸ್.ಎಂ.ಎಸ್.ಎಸ್. ಚೈತನ್ಯದಲ್ಲಿ ಆಯೋಜಿಸಿದ್ದ ಒಕ್ಕೂಟದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಗೆ ಉನ್ನತ ಸ್ಥಾನಮಾನ ಗೌರವವಿದೆ. ಮಹಿಳೆಯರು ಸಂಘಗಳ ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕು. ಮಹಿಳೆ ಎಲ್ಲ ಕೆಲಸ ನಿಭಾಯಿಸಲು ಸಶಕ್ತಳಾಗಿದ್ದಾಳೆ. ಮಗಳಾಗಿ, ಸೊಸೆಯಾಗಿ, ತಾಯಿಯಾಗಿ ವಿವಿಧ ಸ್ತರಗಳಲ್ಲಿ ತನ್ನ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದ್ದಾಳೆ. ಆದರೆ, ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೆ ಭಾರತದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಸಲಹೆ ನೀಡಿದರು.
Kavita Thorat ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೇಮ್ ಕುಮಾರ್ ಮಾತನಾಡಿ, ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನ ಮಾನ ಕಲ್ಪಿಸಲಾಗಿದೆ. ಯಾವುದೇ ಕ್ಷೇತ್ರಗಳಲ್ಲಿ ಹೆಣ್ಣು ಕೆಲಸ ಮಾಡುವುದಕ್ಕೆ ಹಿಂಜರಿಯುವ ಕಾಲ ಈಗಿಲ್ಲ. ಇದೀಗ ಮಹಿಳೆಯರು ಪುರುಷರು ನಿರ್ವಹಿಸಬಹುದಾದ ಎಲ್ಲ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ರೂಪ, ರಾಜ್ಯ ಮಹಿಳಾ ಒಕ್ಕೂಟದ ಪ್ರತಿನಿಧಿ ಶ್ವೇತಾ , ಜನಶಿಕ್ಷಣ ಸಂಸ್ಥೆಯ ಜಗದೀಶ್ ಸೇರಿದಂತೆ ಒಕ್ಕೂಟದ ಪ್ರತಿನಿಧಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...