S. N. Channabasappa ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ಸಂಖ್ಯೆ 26ರ ಅಣ್ಣಾ ನಗರ (ಚಾನೆಲ್ ಏರಿಯಾ) ಬಡಾವಣೆಗೆ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಭೇಟಿ ನೀಡಿ, ಬಡಾವಣೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ಸ್ಥಳೀಯ ನಿವಾಸಿಗಳೊಂದಿಗೆ ಮಾತನಾಡಿ ಸಮಸ್ಯೆಯ ಮಾಹಿತಿ ಪಡೆದು, ಈ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ತಕ್ಷಣ ಚರ್ಚೆ ನಡೆಸಿ, ಶೀಘ್ರದಲ್ಲಿ ಪರಿಹರಿಸುವಂತೆ ಸೂಚಿಸಿದರು.
S. N. Channabasappa ಭೇಟಿಯ ವೇಳೆ ಬಡಾವಣೆಯ ರಾಜಕಾಲುವೆ ಸ್ಥಿತಿಯನ್ನು ಪರಿಶೀಲಿಸಿ, ಮಳೆಗಾಲದಲ್ಲಿ ನೀರಿನ ಸರಾಗ ಹರಿವು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ತುರ್ತು ಸ್ವಚ್ಛತಾ ಕಾರ್ಯಕ್ಕೆ ಹಾಗೂ ಹೂಳು ತೆರವು ಮಾಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.