Sunday, August 2, 2026
Sunday, August 2, 2026

B.Y.Raghavendra ಅನ್ನ ನೀಡುವ ರೈತರಿಗಾಗಿ ಏರ್ಪಡಿಸಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಶ್ಲಾಘನೀಯ : ಬಿ.ವೈ.ರಾಘವೇಂದ್ರ

Date:

B.Y.Raghavendra ರೈತರು ವರ್ಷವಿಡೀ ಶ್ರಮಪಟ್ಟು ಎಲ್ಲರಿಗೂ ಅನ್ನ ನೀಡುತ್ತಾರೆ. ಇಂತಹ ಪುಣ್ಯದ ಕೆಲಸ ಮಾಡುತ್ತಿರುವ ರೈತರಿಗಾಗಿ ಏರ್ಪಡಿಸಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಶ್ಲಾಘನೀಯ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಇವರ ವತಿಯಿಂದ ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ದ ಅಂಗವಾಗಿ ಹೊಳಲೂರು ಗ್ರಾಮದಲ್ಲಿ ಏರ್ಪಡಿಸಿರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕಾರ್ಯಾಗಾರಕ್ಕೆ ಗುರುವಾರ ಅವರು ಚಾಲನೆ ನೀಡಿ ಮಾತನಾಡಿದರು.
ನಮ್ಮ ದೇಶದಲ್ಲಿ ಶೇ.5 ರಷ್ಟು ಸರ್ಕಾರಿ ನೌಕರರು, ಶೇ.20 ರಷ್ಟು ಖಾಸಗಿ ನೌಕರರಿದ್ದರೆ ಉಳಿದ ಶೇ.75 ಅನ್ನದಾತ ರೈತಾಪಿ ವರ್ಗವಿದೆ. ಇಂತಹ ರೈತರಿಗಾಗಿ ಪ್ರಧಾನ ಮಂತ್ರಿಗಳು ಮುಂಗಾರು ಹಂಗಾಮಿಗೆ ಆಧುನಿಕ ಕೃಷಿ ಚಟುವಟಿಕೆಗಳ ಕುರಿತು ರೈತರಿಗೆ ಮಾಹಿತಿ ನಿಡಲು ವಿಜ್ಞಾನಿಗಳನ್ನು ದೇಶದಾದ್ಯಮತ ರೈತರ ಕಡೆ ಕಳುಹಿಸಬೇಕೆಂಬ ಉದ್ದೇಶವನ್ನು ಹೊಂದಿರುವುದು ಕೃಷಿ ವಲಯದಲ್ಲಿ ಬೃಹತ್ ಮಟ್ಟದ ಹೆಜ್ಜೆಯಾಗಿದೆ. ಈ ನಿಟ್ಟಿನಲ್ಲಿ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ, ಭಾರತೀಯ ಕೃಷಿ ಸಂಶೋಧನಾ ಮಂಡಳಿ, ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಒಳಗೊಂಡ ತಂಡವು ಹೊಳಲೂರು ಗ್ರಾಮಕ್ಕೆ ಬಂದು ರೈತರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದರು.
B.Y.Raghavendra ಕೇಂದ್ರ ಸರ್ಕಾರ ಸುಮಾರು 1.27 ಲಕ್ಷ ಸಾವಿರ ಕೋಟಿ ಅನುದಾನ ನೀಡಿ, ರೈತರಿಗೆ ಸಹಾಯ ಮಾಡುತ್ತಿದ್ದು ಸುಮಾರು 27 ಲಕ್ಷ ಸಾವಿರ ರೈತರಿಗೆ ಮಣ್ಣು ಆರೋಗ್ಯ ಚೀಟಿ ನೀಡಿದೆ. ರೂ.2500 ಲಕ್ಷಗಳನ್ನು ಬೀಜ ಅಭಿವೃದ್ದಿ ಮಾಡಲು ಮೀಸಲಿಡಲಾಗುತ್ತಿದೆ. ನೈಸರ್ಗಿಕ ಕೃಷಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ, ಕಿಸಾನ್ ಕ್ರೆಡಿಟ್ ಕಾರ್ಡ್, ಗೊಬ್ಬರ ಸಬ್ಸಿಡಿ, ಕೃಷಿಯಲ್ಲಿ ಡ್ರೋನ್ ಬಳಕೆಯಂತರ ಯೋಜನೆಗಳನ್ನು ರೂಪಿಸಿ, ರೈತರಿಗೆ ನೆರವಾಗುತ್ತಿದೆ. ಈ ವಿಕಸಿತ ಕೃಷಿ ಸಂಕಲ್ಪ ಅಭಿಯಾನದಿಂದ ರೈತರು ಇನ್ನಷ್ಟು ಉತ್ಪಾದನೆ ಮಾಡಲು ಸಹಾಯವಾಗಿದೆ ಎಂದು ತಿಳಿಸಿದರು.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಮಾತನಾಡಿ, ಈ ಅಭಿಯಾನದಲ್ಲಿ ಸುಮಾರು 18000 ರೈತರಿಗೆ ನೇರವಾಗಿ ಮಾಹಿತಿ ನೀಡಲಾಗುತ್ತಿದೆ. ನಮ್ಮ ದೇಶದ ಶ್ರಮಜೀವಿ ರೈತ ಬಾಂಧವರಿಗಾಗಿ ಈ ಮಂಗಾರು ಹಂಗಾಮಿನಲ್ಲಿ ವಿಶ್ವವಿದ್ಯಾಲಯದ ಕೃಷಿ ಕಾಲೇಜು ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳ ಕುರಿತ ಮಾಹಿತಿ, ಸಮಗ್ರ ಕೃಷಿ ಪದ್ದತಿ, ಜಾನುವಾರು ಸಾಕಾಣಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ಜೇನು ಸಾಕಾಣಿಕೆ ಇತ್ಯಾದಿಗಳನ್ನೊಳಗೊಂಡಂತೆ ರೈತರಿಗ ಅರಿವು ಮೂಡಿಸಲಾಗುವುದು. ಮಣ್ಣಿನ ಆರೋಗ್ಯ ಕಾರ್ಡ್ ಆಧಾರಿತ ಸಮತೋಲಿತ ರಸಗೊಪ್ಪಬರಗಳ ಬಳಕೆ, ಬೆಳೆಗಳ ಆಯ್ಕೆ, ಸುಧಾರಿತ ತಳಿಗಳು, ಬೀಜೋಪಚಾರ ಮತ್ತು ಕೀಟ ಹಾಗೂ ರೋಗಗಳ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುತ್ತಿದೆ. ರೈತರು ಈ ಕಾರ್ಯಕ್ರಮದ ಉಪಯೋಗ ಪಡೆಯಬೇಕೆಂದು ತಿಳಿಸಿದರು.
ಕಾಯಕ್ರಮದಲ್ಲಿ ಹೊಳಲೂರು ಗ್ರಾ.ಪಂ ಅಧ್ಯಕ್ಷೆ ರಮ್ಯ ಮಧು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್, ಕೆವಿಕೆ ಮುಖ್ಯಸ್ಥ ಡಾ.ಸುನಿಲ್ ಸಿ, ಕೃಷಿ ವಿವಿ ವಿಸ್ತರಣಾ ನಿರ್ದೇಶಕ , ಡಾ.ಜಿ.ಕೆ ಗಿರಿಜೇಶ್, ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಜಿ, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ.ಗಿರೀಶ್ ಓ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಬಾಬುರತ್ನ ಎ, ಡಾ.ಎಸ್.ಪ್ರದೀಪ್, ಡಾ.ಬಿ.ಸಿ ಹನುಮಂತಸವಾಮಿ, ದೇವರಾಜ್, ಉಲ್ಲಾಸ್ ಮೆಸ್ತ, ರೈತರ ಉತ್ಪಾದಕ ಸಂಸ್ಥೆಗಳ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರುಗಳು, ರೈತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...