Friday, March 20, 2026
Friday, March 20, 2026

Yuvanidhi Scheme ಯುವನಿಧಿ ಗ್ಯಾರಂಟಿ ಯೋಜನೆಯ ಲಾಭ ಅನರ್ಹರು ಪಡೆಯುವುದಕ್ಕೆ ಕಡಿವಾಣ :-ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ

Date:

Yuvanidhi Scheme ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ಜಿಲ್ಲಾಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲರವರು ಹೇಳಿದರು.

ಅವರು ಇಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದಲ್ಲಿ ಆಯೋಜಿಸಿದ್ದ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ 2024 – 2025 ನೇ ಸಾಲಿನ ಯುವನಿಧಿ ಯೋಜನೆಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಭೆಯಲ್ಲಿ ಸದಸ್ಯರು ಮಂಡಿಸಿದ ಅಭಿಪ್ರಾಯ ಕ್ರೂಡೀಕರಿಸಿ ಈ ನಿರ್ಣಯವನ್ನು ಅಂಗೀಕರಿಸಿ, ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಯುವನಧಿ ಯೋಜನೆಯಲ್ಲಿ ಅನರ್ಹರು ಫಲಾನುಭವಿಗಳಾಗಿದ್ದು, ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಮಾಡಲಾಯಿತು ಎಂದು ತಿಳಿಸಿದರು.
Yuvanidhi Scheme ಶಿವಮೊಗ್ಗ ಜಿಲ್ಲೆಯಲ್ಲಿ 6460 ಪದವಿದರು ಮತ್ತು 110 ಡಿಪ್ಲೋಮೋ ಪಡೆದಿದ್ದವರು ಯುವನಿಧಿ ಯೋಜನೆಯಲ್ಲಿ ಫಲಾನುಭವಿಗಳಾಗಿ ನೊಂದಣಿಯಾಗಿದ್ದು, ಈ ಯೋಜನೆಯಿಂದ ಪ್ರತಿ ತಿಂಗಳು ರೂ. 1,79,95,500 ಕೋಟಿ ರೂಪಾಯಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ಆದರೇ ಈ ಯೋಜನೆಯಲ್ಲಿ ನೋಂದಣಿಯಾಗಿದ್ದ ಬಹಳಷ್ಟು ಫಲಾನುಭವಿ ಯುವಕರು ಉದ್ಯೋಗದಲ್ಲಿ ಇದ್ದು ಸಂಬಳ ಪಡೆಯುತ್ತಿದ್ದು, ಸುಳ್ಳು ಮಾಹಿತಿಯನ್ನು ನೀಡಿ ನಿರುದ್ಯೋಗಗಳೆಂದು ಸ್ವಯಂ ಘೋಷಣೆ ಮಾಡಿಕೊಂಡು ಯುವನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ.
ಆದ್ದರಿಂದ ಈ ಬಗ್ಗೆ ರಾಜ್ಯ ಮಟ್ಟದಲ್ಲಿ ತನಿಖೆನಡೆಸಿ ನೈಜ ನಿರುದ್ಯೋಗಿ ಫಲಾನುಭವಿಗಳು ಮಾತ್ರವೇ ಯುವನಿಧಿ ಲಾಭ ಪಡೆಯಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...