Thursday, March 19, 2026
Thursday, March 19, 2026

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ

Date:

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ 2025 ರ ಜುಲೈ 15 ರೊಳಗೆ ತಲುಪುವಂತೆ ಕಳುಹಿಸಬೇಕು.

2024 ನೆಯ ವರ್ಷದ ಅತ್ಯುತ್ತಮ ಕೃತಿಗಳಿಗೆ ಬಹುಮಾನ:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2024ನೆಯ ವರ್ಷದ ಪುಸ್ತಕ ಬಹುಮಾನ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2024ರ ಜನವರಿ 01 ರಿಂದ 2024ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು.

ಕೃತಿಯಲ್ಲಿ ಪ್ರಥಮ ಮುದ್ರಣ 2024 ಎಂದು ಮುದ್ರಿತವಾಗಿರಬೇಕು.
ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿನ ಯುವಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು. (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ), ಕಾದಂಬರಿ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಚದುರಂಗ ದತ್ತಿನಿಧಿ ಬಹುಮಾನಗಳಿಗಾಗಿ), ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ)(ಅಕಾಡೆಮಿ ಮಸ್ತಕ ಬಹುಮಾನ ಹಾಗೂ ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ / ಆತ್ಮಕಥೆ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ), ಸಾಹಿತ್ಯ ವಿಮರ್ಶೆ (ಸಾಹಿತ್ಯಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನಗಳಿಗಾಗಿ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜ್ಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹಸಂವಹನ, ಧಾರ್ಮಿಕ, ದಾರ್ಶನಿಕ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ) / ಸಂಶೋಧನೆ (ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ / ಅಂಕಣ ಬರಹ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಬಿ.ವಿ. ವೀರಭದ್ರಪ್ಪ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-1 (ಇಂಗ್ಲಿಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು( ಎಲ್ ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-2 (ಕನ್ನಡದಿಂದ ಭಾರತೀಯ ಭಾಷೆಗಳಿಗೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು), ಲೇಖಕರ ಮೊದಲ ಸ್ವತಂತ್ರಕೃತಿ (2024ರಲ್ಲಿ ಮುದ್ರಣಗೊಂಡ ಮೊದಲ ಸ್ವತಂತ್ರಕೃತಿ. ಖಾತರಿಪಡಿಸಲು ದೃಢೀಕರಣ ಪತ್ರ ಲಗತ್ತಿಸಬೇಕು.)

Karnataka Sahitya Academy (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಮಧುರಚೆನ್ನ ದತ್ತಿನಿಧಿ ಬಹುಮಾನಗಳಿಗಾಗಿ) (ಕಾವ್ಯ ಪ್ರಕಾರವನ್ನು ಹೊರತುಪಡಿಸಿ), ಕನ್ನಡದಿಂದ ಇಂಗ್ಲಿಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನಕ್ಕಾಗಿ), ದಾನ ಸಾಹಿತ್ಯ (ದಾಸ ಸಾಹಿತ್ಯಕುರಿತ ಸೃಜನ/ ಸೃಜನೇತರ ಕೃತಿಗಳು) (ಶ್ರೀಮತಿ ಜಲಜಾ ಶ್ರೀಪತಿ ಆಚಾರ್ಯಗಂಗೂರ್ ದತ್ತಿನಿಧಿ ಬಹುಮಾನಕ್ಕಾಗಿ), ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು), ಗಜಲ್ ಕಾವ್ಯ (ನಾಡೋಜ ಡಾ. ಶಾಂತರಸ ಗಜಲ್ ಕಾವ್ಯ ದತ್ತಿ ಬಹುಮಾನಕ್ಕಾಗಿ).
ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು: ಮರುಮುದ್ರಣವಾದ ಪುಸ್ತಕಗಳು. ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು. ಪಠ್ಯಪುಸ್ತಕಗಳು. ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು. ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು. ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು.

ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದೆಂದು ಕನ್ನಡ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...