Monday, December 15, 2025
Monday, December 15, 2025

Chamarajendra Academy of Visual Arts ಮೈಸೂರು ದೃಶ್ಯಕಲಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

Date:

Chamarajendra Academy of Visual Arts ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವವರಿಂದ ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಅಹ್ವಾನಿಸಿದೆ.
ಬಿ.ವಿ.ಎ/ಎಂ.ಬಿ.ಎ.ವಿದ್ಯಾರ್ಥಿಗಳು ಸೇರಿದಂತೆ ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ(ಗ್ರಾಫಿಕ್ಸ್) ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮಗಳ ಪ್ರಾಯೋಗಿಕ ಮತ್ತು ಥಿಯರಿ,ಕಲಾ ಇತಿಹಾಸದ ಥಿಯರಿ ಬೋಧನೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪೋಸ್ಟ್ ಡಿಪ್ಲೋಮದಲ್ಲಿ (ಪಿ.ಜಿ.ಡಿಪ್ಲೋಮಾ) ಕನಿಷ್ಠ 55%ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಕನ್ನಡ, ಇಂಗ್ಲೀಷ್, ಹಿಂದಿ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಆಯಾ ಭಾಷಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಸೈಬರ್ ಸೆಕ್ಯೂರಿಟಿ/ಆರ್ಟಿಫಿಶಲ್ ಇಂಟಲಿಜೆಟ್ಸ್ ವಿಷಯಕ್ಕೆ ಸಂಬಂಧಿಸಿದಂತೆ ಎಂ.ಎಸ್‌ಸಿ(ಐಟಿ) ಸ್ನಾತಕೋತ್ತರ ಪದವಿ ಪಡೆದಿರಬೇಕು.
Chamarajendra Academy of Visual Arts ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ www.mysore.nic.in ಮತ್ತು www.cavamysore.karnataka.gov.in ದ ಮೂಲಕ ಮಾಹಿತಿ ಪಡೆದು ಅರ್ಜಿಯನ್ನು ಜೂ.16ರೊಳಗಾಗಿ ಸಲ್ಲಿಸುವುದು. ಜೂ 26 ರಂದು 11.00ಕ್ಕೆ ಸಂಸ್ಥೆಯಲ್ಲಿ ಸಂದರ್ಶನ ನಡೆಸಿ ತರಗತಿಗಳು ಅನ್ವಯವಾಗುವಂತೆ ಕಾರ್ಯ ನಿರ್ವಹಿಸಲು ತಿಳಿಸಲಾಗುವುದು ಎಂದು ಮೈಸೂರು ಕಾವಾ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಹಾಗೂ ದೂ.ಸಂ.: 0821-2438931 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...