Wednesday, May 6, 2026
Wednesday, May 6, 2026

World Environment Day ಪ್ಲಾಸ್ಟಿಕ್ ಉತ್ಪಾದನೆ ನಿಲ್ಲಿಸಿ, ಪರಿಸರ ಉಳಿಸಿ- ಡಾ. ರಾಜೇಶ್ವರಿ

Date:

World Environment Day ಸಹ್ಯಾದ್ರಿ ವಿಜ್ಞಾನ ಕಾಲೇಜಿನ ರೆಡ್ ಕ್ರಾಸ್ ಹಾಗೂ ಪರಿಸರ ವಿಜ್ಞಾನ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ ಪರಿಸರ ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ ದಿನಾಚರಣೆಯನ್ನು ೧೯೭೩ ರಿಂದ ಪ್ರತಿ ವರ್ಷ ಒಂದೊAದು ಘೋಷವಾಕ್ಯದಡಿ ಆಚರಿಸಿಕೊಂಡು ಬರಲಾಗುತ್ತಿದೆ ,ಈ ವರ್ಷದ ಘೋಷವಾಕ್ಯ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಯುವುದಾಗಿದೆ , ಪ್ರತಿ ದಿನ ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರ ಸರ್ವನಾಶವಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕಾಗಿದೆ. ಉತ್ಪಾದನೆಯನ್ನು ಮೂಲದಲ್ಲಿಯೇ ನಿಲ್ಲಿಸುವುದರಿಂದ ಪರಿಸರ ಉಳಿಸಲು ಸಾಧ್ಯವಾಗುವುದು ಸರ್ಕಾರ ಈ ನಿಟ್ಟಿನಲ್ಲಿ ಕೂಡಲೇ ಒಂದು ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದರು. ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಶ್ವರಿ ಅವರು ಸಹ ಮಾತನಾಡುತ್ತಾ ಪ್ಲಾಸ್ಟಿಕ್ ಬಳಸಬೇಡಿ ಎಂದು ತಿಳಿಸುವ ಬದಲು ಪ್ಲಾಸ್ಟಿಕ್ ಉತ್ಪತ್ತಿಯನ್ನು ನಿಲ್ಲಿಸುವುದು World Environment Day ಒಂದು ಸೂಕ್ತ ಕ್ರಮವಾಗಿದೆ ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ನಿಂದ ಸಾಕಷ್ಟು ಸಮಸ್ಯೆಗಳನ್ನು ನಾವು ಮಾಧ್ಯಮಗಳ ಮೂಲಕ ನೋಡುತ್ತಿದ್ದೇವೆ ಆಸ್ಪತ್ರೆಗಳು ಹೆಚ್ಚಾಗುತ್ತಿವೆ ಅದಕ್ಕೆಲ್ಲ ಪರಿಹಾರ ಎಂದರೆ ಪ್ಲಾಸ್ಟಿಕ್ ಉತ್ಪತ್ತಿ ನಿಲ್ಲಿಸುವುದಾಗಿದೆ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳದಿದ್ದರೆ ಮುಂದೆ ದೊಡ್ಡ ಅನಾಹುತವಾಗಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾದ ಡಾ. ಅವಿನಾಶ್, ಎಸ್ಟೇಟ್ ಅಧಿಕಾರಿ ಡಾ. ಮಂಜುನಾಥ್, ಅರಣ್ಯ ಅಧಿಕಾರಿಗಳಾದ ಶ್ರೀಮತಿ ಸಿಂಧು, ರೆಡ್ ಕ್ರಾಸ್ ಅಧಿಕಾರಿಗಳಾದ ಡಾ. ಕೆ .ಎಲ್ ನಾಯಕ್, ಶ್ರೀ ಸಾಯಿಶ್ವರ್, ಎನ್ಎಸ್ಎಸ್ ಅಧಿಕಾರಿಗಳಾದ ಡಾ. ಹಾ.ಮ. ನಾಗಾರ್ಜುನ , ಶ್ರೀ ಅರುಣ್ , ಹಾಗೂ ಕಾಲೇಜಿನ ಸಿಬ್ಬಂದಿಗಳಾದ ಡಾ. ನಾಗರಾಜ್, ಡಾ. ವೆಂಕಟೇಶ್, ಶ್ರೀ ಜೀವನ್, ಶ್ರೀಮತಿ ಶಿಲ್ಪ, ಪ್ರೇಮ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...