Wednesday, June 18, 2025
Wednesday, June 18, 2025

Karnataka Janapada Academy 2024 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

Date:

Karnataka Janapada Academy ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ ದಿನಾಂಕ:01.01.2024 ರಿಂದ 31.12.2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ ಪ್ರಕಾರ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ ಹಾಗೂ ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು/ ಪ್ರಕಾಶಕರು/ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಜೂನ್ 30 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.
Karnataka Janapada Academy ವಿ.ಸೂ. ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು / ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸುವಂತಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

MESCOM ಜೂ.20 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ...