Monday, December 15, 2025
Monday, December 15, 2025

Shivamogga Multipurpose Social Service Society ವಿದ್ಯಾರ್ಥಿಗಳು ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು: ಕವಿತಾ

Date:

Shivamogga Multipurpose Social Service Society ವಿದ್ಯಾರ್ಥಿಗಳು ಪರಿಸರದ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಅಸಂಘಟಿತ ಕೂಲಿ ಕಾರ್ಮಿಕರ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಕವಿತಾ ಥೋರತ್ ಹೇಳಿದರು.
ಅವರು ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿಯಿಂದ ಆಯನೂರಿನ ಮಂಡಘಟ್ಟ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಚೈತ್ರದ ಚಿಗುರು ಮತ್ತು ಪರಿಸರ ದಿನಾಚರಣೆ ಕಾರ್ಯಕ್ರಮಲ್ಲಿ ಮಾತನಾಡಿದರು.
ಪರಿಸರವನ್ನು ಉಳಿಸಿದರೆ ನಾವು ಉಳಿಯುತ್ತೇವೆ. ಆದ್ದರಿಂದ ಪರಿಸರವನ್ನು ನಾಶಮಾಡದೇ ಪರಿಸರ ಉಳಿವಿಗಾಗಿ ಪ್ರತಿಯೊಬ್ಬರು ಜಾಗೃತರಾಗಬೇಕು. ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರ ನಾಶವಾಗುತ್ತದೆ. ಪ್ಲಾಸ್ಟಿಕ್‌ನಿಂದ ಪ್ರಾಣಿ ಸಂಕುಲದ ಮೇಲೂ ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಿರುವಂತೆ ಮಕ್ಕಳಲ್ಲಿ ಅರಿವು ಮೂಡಿಸಿದರು.
Shivamogga Multipurpose Social Service Society ಹಸರೀಕರಣಕ್ಕೆ ಆದ್ಯತೆ ಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಂದಿನ ಪೀಳಿಗೆಗೂ ಪರಿಸರ ಉಳಿಯಬೇಕು. ಪ್ರಾಣಿ, ಪಕ್ಷಿಗಳು ನಮ್ಮೊಂದಿಗೆ ಜೀವಿಸುತ್ತವೆ. ನಮ್ಮ ರಾಜ್ಯದಲ್ಲಿ ಪರಿಸರ ಎಂದರೆ ತಕ್ಷಣ ನೆನಪಾಗುವ ಹೆಸರು ಸಾಲುಮರದ ತಿಮ್ಮಕ್ಕ. ನೂರಾರು ಸಸಿಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿರುವ ತಿಮ್ಮಕ್ಕ, ತಾವು ನೆಟ್ಟ ಸಾಲು ಸಸಿಗಳಿಂದಲೇ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಪಡೆದುಕೊಂಡರು ಎಂದರು.
ಕಾರ್ಯಕ್ರಮದಲ್ಲಿ ಫಾದರ್ ಡಿಸೋಜ, ಸೊಸೈಟಿಯ ಕುಮುದ, ಜಗದೀಶ್, ವಸೂದ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...