Monday, December 15, 2025
Monday, December 15, 2025

karnataka Sanga Shivamogga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ 2025ರ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಸಮಾರಂಭ

Date:

karnataka Sanga Shivamogga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಜೂನ್ 2025ರ ಭಾನುವಾರ, ‘2025ರ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಸಮಾರಂಭ’ ವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಸಂಜೆ 5:30 ಘಂಟೆಗೆ ನಾಡಿನ ಖ್ಯಾತ ಮಾನಸಿಕ ಆರೋಗ್ಯ ತಜ್ಞರು, ವಿಜ್ಞಾನಿ, ಸಾಹಿತಿಗಳಾದ ಬೆಂಗಳೂರಿನ ಡಾ. ಸಿ.ಆರ್. ಚಂದ್ರಶೇಖರ್ ಅವರಿಗೆ ‘ಡಾ. ಕೆ. ಶಿವರಾಮ ಕಾರಂತ ವಿಜ್ಞಾನ ಸಾಹಿತ್ಯ ಪ್ರಶಸ್ತಿ’ ಯನ್ನು ಮತ್ತು ಪ್ರಸಿದ್ಧ ಸಾಹಿತಿ, ಸಂಶೋಧಕರಾದ ಮೈಸೂರಿನ ಡಾ. ಟಿ.ಎನ್. ನಾಗರತ್ನ ಅವರಿಗೆ ‘ಡಾ. ಶಂಬಾ ಜೋಶಿ ಸಂಶೋಧನಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು.

ಡಾ. ಸಿ.ಆರ್. ಚಂದ್ರಶೇಖರ್ ಅವರು ಕುರಿತು ಡಾ. ಕೆ.ಎಸ್. ಪವಿತ್ರ, ವೈದ್ಯೆ, ಸಾಹಿತಿ, ಶಿವಮೊಗ್ಗ ಮತ್ತು ಡಾ. ಟಿ.ಎನ್. ನಾಗರತ್ನ ಅವರ ಕುರಿತು ಪ್ರೊ. ಎನ್.ಎಂ. ತಳವಾರ್, ಲೇಖಕರು, ಸಂಶೋಧಕರು ಮೈಸೂರು ಇವರುಗಳು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಪ್ರಶಸ್ತಿಯು 25,000/- ರೂ. (ಇಪ್ಪತ್ತೈದು ಸಾವಿರ) ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತಿ ಅವರು ವಹಿಸಲಿದ್ದಾರೆ.

karnataka Sanga Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...