Sunday, August 2, 2026
Sunday, August 2, 2026

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

Date:

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯನವರು ಸಭೆ ನಡೆಸಿ ಸಲಹೆ ಸೂಚನೆ ನೀಡಿದರು. ಈ ಸಭೆಯ ಮುಖ್ಯಾಂಶಗಳು:

  • ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.
  • ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.
  • ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ.
  • ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ.
  • ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
  • ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...